ಪ್ರಥಮ ಅಧ್ಯಾಯಕ್ಕೆ ತೆರೆ; ಬಳ್ಳಾರಿ-ಕೋಲಾರದಲ್ಲಿ ಹಾರಿದ ಗುಂಡು
ಪ್ರಥಮ ಅಧ್ಯಾಯಕ್ಕೆ ತೆರೆ; ಬಳ್ಳಾರಿ-ಕೋಲಾರದಲ್ಲಿ ಹಾರಿದ ಗುಂಡು
ಕನಕಪುರದಲ್ಲಿ ಕಲ್ಲು ತೂರಾಟ, ಶಿವಕುಮಾರ್ ಕಾರು ಜಖಂ
ಮಾರಕಾಸ್ತ್ರಗಳನ್ನು ಹೊಂದಿದ್ದ ಗುಂಪುಗಳು ಘರ್ಷಣೆಗೆ ತೊಡಗಿದಾಗ ಮಧ್ಯಪ್ರವೇಶಿಸಿದ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಪರಿಸ್ಥಿತಿಗೆ ತಹಬಂದಿಗೆ ಬರದೆಹೋದಾಗ ಗಾಳಿಯಲ್ಲಿ ಗುಂಡು ಹಾರಿಸಿದರು.
ಕೋಲಾರದಲ್ಲೂ ಗುಂಡು : ಕೋಲಾರದ ರಹಮತ್ ನಗರದಲ್ಲಿ ದುಷ್ಕರ್ಮಿಗಳು ಮತಗಟ್ಟೆಯನ್ನು ವಶಪಡಿಸಿಕೊಳ್ಳಲು ಯತ್ನಿಸಿದಾಗ ಉಂಟಾದ ಕೋಲಾಹಲದ ಪರಿಸ್ಥಿತಿಯಲ್ಲಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದರು. ಮತಪಟ್ಟಿಯಲ್ಲಿ ತಮ್ಮ ಹೆಸರಿಲ್ಲದ ಕಾರಣ ಆಕ್ರೋಶಗೊಂಡ ಜನರ ಗುಂಪು ಮೂರು ಮತಗಟ್ಟೆಗಳ ಮೇಲೆ ದಾಳಿ ನಡೆಸಿತು. ಕೆಲವರು ಮತಯಂತ್ರಗಳನ್ನು ನಾಶಪಡಿಸಲು ಯತ್ನಿಸಿದರು. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದರು.
ಬಿಜಾಪುರದ ಬಸವನ ಬಾಗೇವಾಡಿಯಲ್ಲಿ ಸಹ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಗುಂಪು ಘರ್ಷಣೆಗೆ ಕಾರಣವಾಗಿದೆ. ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ಹದಗೆಡುವ ಮಟ್ಟಕ್ಕೆ ಹೋಗಲಿಲ್ಲ.
ಶಿವಕುಮಾರ್ ಕಾರು ಜಖಂ : ಕನಕಪುರದಲ್ಲಿ ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾದಳ ಕಾರ್ಯಕರ್ತರುಗಳು ಘರ್ಷಣೆಯಲ್ಲಿ ಹತ್ತಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿವೆ. ಕಲ್ಲು ತೂರಾಟದಲ್ಲಿ ಸಚಿವ ಡಿ.ಕೆ. ಶಿವಕುಮಾರ್ ಅವರ ಕಾರೂ ಹಾನಿಗೊಳಗಾಗಿದೆ.
ಚಿತ್ರದುರ್ಗದಲ್ಲಿ ಗುರುತಿನ ಚೀಟಿ ಇದ್ದರೂ ಮತದಾರ ಪಟ್ಟಿಯಲ್ಲಿ ಹೆಸರಿರದ ಕಾರಣದಿಂದ ಮತ ಚಲಾಯಿಸಲಾಗದ ಮತದಾನ ವಂಚಿತರು ಜಿಲ್ಲಾಧಿಕಾರಿಯವರ ಕಛೇರಿಯೆದುರು ಧರಣಿ ನಡೆಸಲು ಮುಂದಾದಾಗ ಪೊಲೀಸರು ಲಾಠಿ ಪ್ರಹಾರ ನಡೆಸಿದರು.
(ಇನ್ಫೋ ವಾರ್ತೆ)
ಮುಖಪುಟ / ಕುರುಕ್ಷೇತ್ರ-2004
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications