ಲಕ್ನೋದ ‘ಸೀರೆ ದುರಂತ’ಕ್ಕೂ ಅಟಲ್ಗೂ ಎತ್ತಣ ನಂಟು - ವೆಂಕಯ್ಯ
ಲಕ್ನೋದ ‘ಸೀರೆ ದುರಂತ’ಕ್ಕೂ ಅಟಲ್ಗೂ ಎತ್ತಣ ನಂಟು - ವೆಂಕಯ್ಯ
ಎನ್ಡಿಎ ಸಾಧನೆ ಕುರಿತು ಚರ್ಚಿಸಲು ಸೋನಿಯಾಗೆ ವೆಂಕಯ್ಯನಾಯ್ಡು ಆಹ್ವಾನ
ಸೀರೆ ದುರಂತದಲ್ಲಿ ಪ್ರಧಾನಿ ವಾಜಪೇಯಿ ಹೆಸರನ್ನು ಸೇರಿಸಿ ಕಾಂಗ್ರೆಸ್ ತೆಗಳುತ್ತಿರುವುದು ಒಂದು ದುರಂತ. ಈ ದುರ್ಘಟನೆಯಲ್ಲಿ ಪ್ರಧಾನಿ ವಾಜಪೇಯಿ ಹೆಸರನ್ನು ಸೇರಿಸಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲೆತ್ನಿಸುತ್ತಿದೆ. ಸತ್ಯಕ್ಕೆ ಬಲು ದೂರವಾದ ಮಾತನ್ನು ಅವರು ಆಡುತ್ತಿದ್ದಾರೆ. ಆ ಮೂಲಕ ತನ್ನ ಜವಾಬ್ದಾರಿಗಳಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ವೆಂಕಯ್ಯ ನಾಯ್ಡು ಆಪಾದಿಸಿದರು. ರಾಜ್ಯದಲ್ಲಿ ಚುನಾವಣಾ ಪ್ರವಾಸದಲ್ಲಿರುವ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಈ ದುರ್ಘಟನೆಗೆ ವಾಜಪೇಯಿ ಆಗಲಿ ಅಥವಾ ಬಿಜೆಪಿಯಾಗಲಿ ನೈತಿಕವಾಗಿ ಹೊಣೆಯಲ್ಲ. ಇದು ಲಾಲ್ ಜೀ ಟೆಂಡನ್ ಅವರ ಹುಟ್ಟುಹಬ್ಬ. ಇದು ಖಾಸಗಿ ಸಮಾರಂಭ. ಕಾಂಗ್ರೆಸ್ಗೆ ಮೊದಲ ಹಂತದ ಚುನಾವಣೆಯ ಪರಿಣಾಮದಿಂದ ಭಯವಾಗಿದೆ. ಅದಕ್ಕೆ ಅದು ಮತದಾನೋತ್ತರ ಮತ್ತು ಪೂರ್ವ ಸಮೀಕ್ಷೆಗಳ ವರದಿಯನ್ನು ಒಳಗೊಂಡು ಎಲ್ಲದರಲ್ಲೂ ತಪ್ಪನ್ನು ಹುಡುಕಲು ಪ್ರಯತ್ನಿಸುತ್ತಿದೆ. ಮತ ಎಣಿಕೆಯ ಬಳಿಕ , ಸೋತ ಕಾಂಗ್ರೆಸ್ ತನ್ನಲ್ಲೇ ತಪ್ಪು ಕಂಡುಕೊಂಡರೆ ಅದರಲ್ಲಿ ವಿಶೇಷವೇನಿಲ್ಲ ಎಂದು ನಾಯ್ಡು ಹೇಳಿದರು.
ಸೋನಿಯಾ ಗಾಂಧಿ ಎನ್ಡಿಎ ಮೈತ್ರಿಕೂಟದ ಅಭಿವೃದ್ಧಿ ಕಾರ್ಯದ ಕುರಿತು ಟೀಕಿಸುತ್ತಾರೆ. ಬೇಕಾದರೆ ಆ ಕುರಿತು ಅವರ ಜೊತೆ ಮಾತುಕತೆ ನಡೆಸಲು ನಾವು ತಯಾರಿದ್ದೇವೆ ಎಂದು ವೆಂಕಯ್ಯನಾಯ್ಡು ಚರ್ಚೆಗೆ ಆಹ್ವಾನವಿತ್ತರು. ಮತದಾರರ ಪಟ್ಟಿಯಲ್ಲಿ ಅನೇಕ ಹೆಸರುಗಳು ಬಿಟ್ಟು ಹೋದುದಕ್ಕೆ ಬೇಸರ ವ್ಯಕ್ತಪಡಿಸಿದ ಅವರು, ಚುನಾವಣಾ ಆಯೋಗ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದರು.
(ಪಿಟಿಐ)
ಮುಖಪುಟ / ಕುರುಕ್ಷೇತ್ರ-2004
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications