ಜಾತ್ಯತೀತ ಜನತಾದಳ ಅಧಿಕಾರಕ್ಕೆ ಬಂದರೆ ಸಿದ್ಧರಾಮಯ್ಯ ಮು. ಮಂ.
ಜಾತ್ಯತೀತ ಜನತಾದಳ ಅಧಿಕಾರಕ್ಕೆ ಬಂದರೆ ಸಿದ್ಧರಾಮಯ್ಯ ಮು. ಮಂ.
ತರೀಕೆರೆಯಲ್ಲಿ ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡ ಘೋಷಣೆ
ತಮ್ಮ ಪಕ್ಷದ ಆಭ್ಯರ್ಥಿ ಪರ ಏಪ್ರಿಲ್ 23ರಂದು ದೇವೇಗೌಡ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದರು.
ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನು ಕೈಯಲ್ಲಿ ಹಿಡಿದುಕೊಂಡೆ ಮಾತನಾಡಿದ ಅವರು, ಇದನ್ನು ನಮ್ಮ ಪ್ರಣಾಳಿಕೆಯಿಂದ ನಕಲಿ ಮಾಡಲಾಗಿದೆ ಎಂದು ಆಪಾದಿಸಿದರು. ಕರೆಂಟು, ನೀರು, ಉದ್ಯೋಗ ಕೊಡದೆ ರೈತಾಪಿ ವರ್ಗವನ್ನು ಸಾಯುವಂತೆ ಮಾಡಿದ ಕಾಂಗ್ರೆಸನ್ನು ಒದ್ದು ಮನೆಗೆ ಓಡಿಸುವಂತೆ ಮತದಾರರಿಗೆ ದೇವೇಗೌಡ ಕರೆ ನೀಡಿದರು.
ನಮ್ಮ ಸರಕಾರ ಕೇಜಿಗೆ 3ರೂ.ನಂತೆ ಅಕ್ಕಿ ಕೊಡುತ್ತಿತ್ತು. ಕೃಷ್ಣ ರೂ.3.20 ಕ್ಕೆ ಕೊಡುವುದಾಗಿ ಡಂಗುರ ಸಾರಿ 4 ವರ್ಷ ಏನು ಮಾಡಿದರು? ಅಂತಹ ಇನ್ನಷ್ಟು ಆಶ್ವಾಸನೆಗಳು ಎಲ್ಲಿ ಹೋದವು ಎಂದು ಪ್ರಶ್ನಿಸಿದರು.
ನಾನು ರಾಜ್ಯಕ್ಕೆ ಒಳ್ಳೆಯದನ್ನು ಮಾಡಬೇಕು ಎಂಬ ಹುಚ್ಚಿರುವವನು. ಆದರೆ ಈಗ ಕೊಡಲು ಭರವಸೆ ಬಿಟ್ಟು ಬೇರೇನೂ ನನ್ನ ಬಳಿ ಇಲ್ಲ. ಭಗವದ್ಗೀತೆ, ಬೈಬಲ್, ಕುರಾನ್ ಎಲ್ಲಾ ಇದೇ ನನಗೆ. ಇದನ್ನು ಪ್ರಾಮಾಣಿಕವಾಗಿ ಪಾಲನೆ ಮಾಡುತ್ತೇನೆ. ಆದರೆ ಅಧಿಕಾರ ನೀವು ಕೊಡಬೇಕು ಎಂದು ದೇವೇಗೌಡ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ಕುರುಕ್ಷೇತ್ರ-2004
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications