ಮದ್ದೂರು, ಸಾಗರ, ಹಾವೇರೀಲಿ ಚಕಮಕಿ, ಪೊಲೀಸರ ಲಾಠಿಪ್ರಹಾರ
ಮದ್ದೂರು, ಸಾಗರ, ಹಾವೇರೀಲಿ ಚಕಮಕಿ, ಪೊಲೀಸರ ಲಾಠಿಪ್ರಹಾರ
ಹೊಳೆನರಸೀಪುರದಲ್ಲಿ ದೇವೇಗೌಡರ ಸತಾಯಿಸಿದ ಮತಯಂತ್ರ
ಮತಯಂತ್ರದಲ್ಲಿನ ದೋಷಗಳು, ಮತಪಟ್ಟಿಯಲ್ಲಿ ಹೆಸರು ನಾಪತ್ತೆ , ಕೆಲವೆಡೆ ಅಕ್ರಮ ಮತದಾನಕ್ಕೆ ಯತ್ನ- ಮುಂತಾದ ಘಟನೆಗಳು ಈ ಬಾರಿಯೂ ಮರುಕಳಿಸಿದೆ. ಮಂಡ್ಯದ, ಮದ್ದೂರು ವಿಧಾನಸಭಾ ಕ್ಷೇತ್ರದ ರಾಮ ರಹೀಮ ನಗರದಲ್ಲಿ ನಡೆದ ಕಾಂಗ್ರೆಸ್ ಹಾಗೂ ಜಾತ್ಯತೀತ ಜನತಾದಳದ ಕಾರ್ಯಕರ್ತರ ನಡುವಿನ ಘರ್ಷಣೆಯಲ್ಲಿ 6 ಮಂದಿ ಗಾಯಗೊಂಡಿದ್ದಾರೆ.
ಉಡುಪಿ ವಿಧಾನಸಭಾ ಕ್ಷೇತ್ರದ ಯಾದಪಡವು ಗ್ರಾಮದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು .
ಚುನಾವಣೆಯ ಮುಖ್ಯಾಂಶಗಳು :
- ನಾಗಮಂಗಲದ ಟಿ.ಬಿ.ಮತಗಟ್ಟೆಯ ಬಳಿ ಮತದಾರರಿಗೆ ಮೂಗುತಿ ವಿತರಿಸುತ್ತಿದ್ದ ಕಾಂಗ್ರೆಸ್ ಏಜೆಂಟ್ ಒಬ್ಬನನ್ನು ಜಾತ್ಯತೀತ ಜನತಾದಳ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
- ಹಾವೇರಿ ಜಿಲ್ಲೆಯ ಆಲೂರು ಗ್ರಾಮದಲ್ಲಿ 1200 ಮಂದಿಯ ಹೆಸರುಗಳು ಮತಪಟ್ಟಿಯಿಂದ ನಾಪತ್ತೆಯಾಗಿದ್ದು , ವೋಟು ವಂಚಿತ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದರು. ಹಾವೇರಿ ವಿಧಾನಸಭಾ ಕ್ಷೇತ್ರದ ಮತಗಟ್ಟೆಯಾಂದರಲ್ಲಿ ಕಲ್ಲು ತೂರಾಟ ನಡೆದಿದ್ದು , 4 ಮಂದಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಪರಿಸ್ಥಿತಿಯನ್ನು ತಹಬಂದಿಗೆ ತರಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.
- ಧಾರವಾಡದ ಯಾದವಾಡ ಮತಗಟ್ಟೆ ಹಾಗೂ ಚಿಕ್ಕಮಗಳೂರಿನ ಹಲವು ಮತಗಟ್ಟೆಗಳಲ್ಲಿ ಮತದಾರರ ಹೆಸರು ಮತಪಟ್ಟಿಯಿಂದ ನಾಪತ್ತೆಯಾದ ಕಾರಣ ಗೊಂದಲದ ವಾತಾವರಣ ಉಂಟಾಗಿತ್ತು .
- ಸಾಗರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ಉದ್ವಿಗ್ನಗೊಂಡಿತ್ತು .
ಚುನಾವಣಾ ಹಿಂಸಾಚಾರಕ್ಕೆ 8 ಬಲಿ : ದೇಶದ ವಿವಿಧ ಭಾಗಗಳಲ್ಲಿ ನಡೆದಿರುವ ಚುನಾವಣಾ ಹಿಂಸಾಚಾರಕ್ಕೆ ಕನಿಷ್ಠ 8 ಮಂದಿ ಬಲಿಯಾಗಿದ್ದಾರೆ. ಮಣಿಪುರದಲ್ಲಿ ಮೂವರು, ಜಾರ್ಖಂಡ್ನಲ್ಲಿ ಇಬ್ಬರು, ಬಿಹಾರ ಹಾಗೂ ಆಂಧ್ರಪ್ರದೇಶಗಳಲ್ಲಿ ತಲಾ ಒಬ್ಬರು ಚುನಾವಣಾ ಹಿಂಸಾಚಾರಕ್ಕೆ ಬಲಿಯಾಗಿದ್ದಾರೆ.
ಉತ್ತರ ಪ್ರದೇಶ, ಮಣಿಪುರ, ಜಾರ್ಖಂಡ್, ಆಂಧ್ರಪ್ರದೇಶ, ಬಿಹಾರ, ಕಾಶ್ಮೀರಗಳಲ್ಲಿ ವ್ಯಾಪಕ ಹಿಂಸಾಚಾರ ನಡೆದಿದೆ. ಕೆಲವೆಡೆ ಮತಗಟ್ಟೆಗಳ ಮೇಲೆ ಉಗ್ರರ ದಾಳಿ ನಡೆದಿದೆ.
(ಏಜನ್ಸೀಸ್)
ಮುಖಪುಟ / ಕುರುಕ್ಷೇತ್ರ-2004
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications