ಕಾಂಗ್ರೆಸ್ಗೆ 132 ಸ್ಥಾನ, ಇದು ಮುಖ್ಯಮಂತ್ರಿ ಎಸ್ಸೆಂ. ಕೃಷ್ಣರ ಸಮೀಕ್ಷೆ..
ಕಾಂಗ್ರೆಸ್ಗೆ 132 ಸ್ಥಾನ, ಇದು ಮುಖ್ಯಮಂತ್ರಿ ಎಸ್ಸೆಂ. ಕೃಷ್ಣರ ಸಮೀಕ್ಷೆ..
ಪ್ರತಿಪಕ್ಷಗಳ ಟೀಕೆಗಳ ಕುರಿತು ನಿಷ್ಪಾಪಿ ಮುಖ್ಯಮಂತ್ರಿ ಆಕ್ಷೇಪ
ಈ ಮುನ್ನ ವಾಜಪೇಯಿ ಅಲೆ ಇದೆ ಎಂದು ನೀವೇ ಹೇಳಿದ್ದಿರಿ. ಈಗ ಕಾಂಗ್ರೆಸ್ಗೆ ಪರಿಸ್ಥಿತಿ ಅನುಕೂಲಕರವಾಗಿದೆ ಎಂದು ಹೇಳುತ್ತಿದ್ದೀರಿ ಎಂದು ಚುನಾವಣಾ ಸಮೀಕ್ಷೆಗಳ ಕುರಿತು ಮಾತನಾಡುತ್ತಿದ್ದ ಕೃಷ್ಣ ಮಾಧ್ಯಮ ಪ್ರತಿನಿಧಿಗಳನ್ನು ಛೇಡಿಸಿದರು. ಅವರು ಏ.29ರ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ನಾನು ನನ್ನದೇ ಆದ ಸ್ವಂತ ಸಮೀಕ್ಷೆಯಾಂದನ್ನು ನಡೆಸಿದ್ದೇನೆ. ಈ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ 132 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ ಮರಳಲಿದೆ ಎಂದು ಕೃಷ್ಣ ಹೇಳಿದರು.
ರಾಜ್ಯದಲ್ಲಿನ ಪರಿಸ್ಥಿತಿ ಆಡಳಿತ ಪಕ್ಷಕ್ಕೆ ಅನುಕೂಲಕರವಾಗಿದೆ. ಅದರಲ್ಲೂ, ಏಪ್ರಿಲ್ 26ರಂದು 13 ಲೋಕಸಭೆ ಹಾಗೂ 104 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಎರಡನೇ ಹಂತದ ಮತದಾನದ ಸಂದರ್ಭದಲ್ಲಂತೂ ಜನತೆ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಒಲವು ವ್ಯಕ್ತಪಡಿಸಿದ್ದಾರೆ ಎಂದು ಮುಖ್ಯಮಂತ್ರಿ ಕೃಷ್ಣ ಹೇಳಿದರು.
ನಾನು ನಿಷ್ಪಾಪಿ : ಮತಪಟ್ಟಿಯಲ್ಲಿ ಮತದಾರರ ಹೆಸರು ಬಿಟ್ಟುಹೋಗಿರುವ ಕುರಿತು ಪ್ರತಿಪಕ್ಷಗಳು ತಮ್ಮ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದ ಕೃಷ್ಣ , ಇದರಲ್ಲಿ ತಮ್ಮ ಪಾತ್ರವೇನೂ ಇಲ್ಲ ಎಂದು ಸ್ಪಷ್ಟಪಡಿಸಿದರು. ತಮ್ಮನ್ನು ಟೀಕಿಸಿದ ಪ್ರತಿಪಕ್ಷಗಳನ್ನು , ವಿಶೇಷವಾಗಿ ಜಾತ್ಯತೀತ ಜನತಾದಳದ ನಾಯಕರನ್ನು ಕೃಷ್ಣ ತರಾಟೆಗೆ ತೆಗೆದುಕೊಂಡರು.
ಮತಪಟ್ಟಿಯಲ್ಲಿ ಗೊಂದಲಗಳಿರುವುದಕ್ಕೆ ತಾವು ಜವಾಬ್ದಾರರಲ್ಲ . ಮತಪಟ್ಟಿಯನ್ನು ರಚಿಸುವಲ್ಲಿ ಎಲ್ಲ ರಾಜ್ಯಗಳಲ್ಲೂ ಒಂದೇರೀತಿಯ ಕ್ರಮವನ್ನು ಚುನಾವಣಾ ಆಯೋಗದ ನಿರ್ದೇಶನದಂತೆ ಅನುಸರಿಸಲಾಗಿದೆ. ಮತಪಟ್ಟಿಯನ್ನು ಪರಿಷ್ಕರಿಸುವ ಸಂದರ್ಭದಲ್ಲಿ ಆಯೋಗ ಅಪೇಕ್ಷಿಸಿದ ಎಲ್ಲ ಸೌಲಭ್ಯ ಹಾಗೂ ನೆರವನ್ನು ರಾಜ್ಯ ಸರ್ಕಾರ ಒದಗಿಸಿತ್ತು ಎಂದು ಕೃಷ್ಣ ಹೇಳಿದರು.
ತಮ್ಮ ವಿರುದ್ಧದ ಪ್ರತಿಪಕ್ಷಗಳ ನಾಯಕರ ಟೀಕೆಗಳು ದುರುದ್ದೇಶದಿಂದ ಕೂಡಿವೆ ಹಾಗೂ ರಾಜಕೀಯ ಪ್ರೇರಿತ ಎಂದು ಕೃಷ್ಣ ಬಣ್ಣಿಸಿದರು.
(ಪಿಟಿಐ)
ಮುಖಪುಟ / ಕುರುಕ್ಷೇತ್ರ-2004
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications