ಬೆಂಗಳೂರು ವಿವಿ ಪದವಿ ತರಗತಿಗೆ ಈ ಬಾರಿಯಿಂದ ಸೆಮಿಸ್ಟರ್ ಪದ್ಧತಿ
ಬೆಂಗಳೂರು ವಿವಿ ಪದವಿ ತರಗತಿಗೆ ಈ ಬಾರಿಯಿಂದ ಸೆಮಿಸ್ಟರ್ ಪದ್ಧತಿ
ಸಂವಿಧಾನ, ಗಣಕ ಯಂತ್ರ ಮತ್ತು ಪರಿಸರ - ಕಡ್ಡಾಯ ಪಠ್ಯ
ಬಿ.ಎ. , ಬಿ.ಎಸ್ಸಿ. ಹಾಗೂ ಬಿ.ಕಾಂ. ಪದವಿ ತರಗತಿಗಳಿಗೆ ಸೆಮಿಸ್ಟರ್ ಪದ್ಧತಿಯನ್ನು ಮುಂಬರುವ ಶೈಕ್ಷಣಿಕ ವರ್ಷದಿಂದ ಅಳವಡಿಸಲು ಬೆಂಗಳೂರು ನಿರ್ಧರಿಸಿದೆ. ಹೊಸ ಸೆಮಿಸ್ಟರ್ ಪದ್ಧತಿಯ ಪ್ರಕಾರ ಪದವಿ ತರಗತಿಯಲ್ಲಿ ವಿದ್ಯಾರ್ಥಿಗಳು ಭಾರತೀಯ ಸಂವಿಧಾನ, ಗಣಕಯಂತ್ರದ ಪ್ರಾಥಮಿಕ ಮಾಹಿತಿಗಳು ಮತ್ತು ಪರಿಸರ ಅಧ್ಯಯನ ಈ ಮೂರು ವಿಷಯಗಳನ್ನೂ ಕಡ್ಡಾಯವಾಗಿ ಅಭ್ಯಸಿಸಬೇಕು. ಇದರೊಂದಿಗೆ ಭಾಷಾ ವಿಷಯ, ಐಚ್ಛಿಕ ವಿಷಯಗಳಿರುತ್ತವೆ. ಭಾರತೀಯ ಸಂವಿಧಾನ, ಗಣಕಯಂತ್ರ ಪ್ರಾಥಮಿಕ ಮಾಹಿತಿ ವಿಷಯಗಳನ್ನು ಮೂರು ಮತ್ತು ನಾಲ್ಕನೇ ಸೆಮಿಸ್ಟರ್ನಲ್ಲಿ ಪರಿಚಯಿಸಲಾಗುವುದು.
ಬೆಂಗಳೂರು ವಿಶ್ವ ವಿದ್ಯಾಲಯವು ಏಪ್ರಿಲ್ 28ರಂದು ನಡೆದ ಶಿಕ್ಷಣ ಮಂಡಳಿಯ ಸಭೆಯಲ್ಲಿ ಸೆಮಿಸ್ಟರ್ ಪದ್ಧತಿಯನ್ನು ಅಂಗೀಕರಿಸಿತು. ಭಾರತೀಯ ಸಂವಿಧಾನ ವಿಷಯವನ್ನು ಪದವಿ ಪಠ್ಯದಲ್ಲಿ ಅಳವಡಿಸುವ ನಿರ್ಧಾರವನ್ನು ಅಂತರ್ ವಿಶ್ವ ವಿದ್ಯಾಲಯಗಳ ಮಂಡಳಿಯಲ್ಲಿ ಸಮಾಲೋಚನೆ ನಡೆಸಿ ನಿರ್ಧರಿಸಲಾಗಿದೆ ಎಂದು ಉಪ ಕುಲಪತಿಗಳಾದ ಎಂ. ಎಸ್. ತಿಮ್ಮಪ್ಪ ಸುದ್ದಿಗಾರರಿಗೆ ತಿಳಿಸಿದರು.
ಪ್ರಸ್ತುತ ಇರುವಂತೆ ಮೂರು ಐಚ್ಛಿಕ ವಿಷಯ ಮತ್ತು ಭಾಷಾ ವಿಷಯಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ವಾರ್ಷಿಕವಾಗಿ ನಡೆಯುತ್ತಿದ್ದ ಕೋರ್ಸುಗಳನ್ನು ಕರೆಸ್ಪಾಂಡೆಂಟ್ ಮತ್ತು ಸಂಜೆ ಕಾಲೇಜುಗಳಾಗಿ ಮುಂದುವರಿಸಲಾಗುವುದು ಎಂದು ತಿಮ್ಮಪ್ಪ ತಿಳಿಸಿದರು.
ಹೊಸ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಮುನ್ನ ಉಪನ್ಯಾಸಕರುಗಳಿಗೆ ಸೂಕ್ತ ತರಬೇತಿ ನೀಡಲಾಗುವುದು ಮತ್ತು ಹೊಸ ಪಠ್ಯಗಳನ್ನು ಸೆಮಿಸ್ಟರ್ ಪದ್ಧತಿಯ ಬೋಧನಾ ಕ್ರಮಗಳಲ್ಲಿ ಸಿದ್ಧಗೊಳಿಸಲಾಗುವುದು. ಇದರಿಂದ ಕಡಿಮೆ ಅವಧಿಯಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ವಿಷಯಗಳನ್ನು ತಿಳಿಯುವಲ್ಲಿ ಅನುಕೂಲವಾಗಿ ಉತ್ತಮ ಫಲಿತಾಂಶ ಬರುವಲ್ಲಿ ಯಶಸ್ವಿಯಾಗಬಹುದು ಎಂದು ತಿಮ್ಮಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.
(ಏಜನ್ಸೀಸ್)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications