ಎಲ್ರೂಸೇರ್ಕೊಂಡು ನಾಮ ಹಾಕ್ಬಿಡ್ತಾರೆ ಸಾರ್ ಎಂದ್ರು ಸಿದ್ರಾಮಯ್ಯ
ಎಲ್ರೂಸೇರ್ಕೊಂಡು ನಾಮ ಹಾಕ್ಬಿಡ್ತಾರೆ ಸಾರ್ ಎಂದ್ರು ಸಿದ್ರಾಮಯ್ಯ
ಚುನಾವಣಾ ಸಮೀಕ್ಷೆಗಳನ್ನು ರದ್ದು ಪಡಿಸಲು ಜಾತ್ಯತೀತ ದಳ ಆಗ್ರಹ
ಸಮೀಕ್ಷೆಗಳು ನಿರ್ದಿಷ್ಠ ಪಕ್ಷದ ಪರವಾಗಿದ್ದಂತಿದೆ. ಇಂತಹ ಸಮೀಕ್ಷೆಗಳು ನಮ್ಮಂತಹ ಪ್ರಗತಿಪರ ಪಕ್ಷಗಳಿಗೆ ಮಾರಕವಾಗಿ ಪರಿಣಮಿಸುತ್ತವೆ. ಆದ್ದರಿಂದ ಅವುಗಳನ್ನು ನಿಷೇಧಿಸಬೇಕಾಗಿದೆ ಎಂದು ಸಿದ್ಧರಾಮಯ್ಯ ಏ.28ರಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸುದ್ದಿಗೋಷ್ಠಿಯುದ್ದಕ್ಕೂ ಸಮೀಕ್ಷೆಗಳನ್ನು ಟೀಕಿಸಿ, ವ್ಯಂಗ್ಯವಾಡಿದ ಸಿದ್ಧರಾಮಯ್ಯ, ಸಮೀಕ್ಷೆಗಳಿಗೆ ಸವಾಲು ಹಾಕಿದರು. ಸದ್ಯ, ಹಳ್ಳಿಜನ ಟೀವಿ ನೋಡೊಲ್ಲ , ಪೇಪರ್ ಓದಲ್ಲ. ನಾವು ಬಚಾವ್ ಆಗಿದ್ದೀವಿ. ಇಲ್ಲದಿದ್ದಲ್ಲಿ ಎಲ್ಲ ಸೇರ್ಕೊಂಡ್ ನಮಗೆ ನಾಮ ಹಾಕಿ ಬಿಡೋರ್ ಎಂದು ಮೂದಲಿಸಿದರು.
ಒಂದು ಪತ್ರಿಕೆಯಂತೂ ನಮಗೆ ಸೊನ್ನೆ ಸ್ಥಾನ ಬರುವುದೆಂದು ಹೇಳಿದ್ದಾರೆ. ಸೊನ್ನೆ ಸ್ಥಾನ ಬಂದರೆ ನಾನು ರಾಜಕೀಯ ಬಿಡುತ್ತೇನೆ. ಹೆಚ್ಚು ಬಂದರೆ ಅವರು ವೃತ್ತಿ ಬಿಡುತ್ತಾರಾ? ಎಂದು ಪ್ರಶ್ನಿಸಿದರು.
ನಮ್ಮ ಪಕ್ಷದ ಸಮೀಕ್ಷೆಯ ಪ್ರಕಾರ ಜಾತ್ಯತೀತ ಜನತಾದಕ್ಕೆ 113 ಸ್ಥಾನಗಳು ಬರುತ್ತವೆ. ನಾವು ಸರಳ ಬಹುಮತ ಪಡೆದು ಅಧಿಕಾರ ನಡೆಸುತ್ತೇವೆ. ನಂತರದ ಸ್ಥಾನ ಕಾಂಗ್ರೆಸ್ ಪಡೆದರೆ, ಬಿಜೆಪಿ ಮೂರನೇ ಸ್ಥಾನದಲ್ಲೇ ತೃಪ್ತಿ ಪಡಲಿದೆ ಎಂದು ಹೇಳಿದರು.
ಮತದಾರರ ಪಟ್ಟಿಯಿಂದ ಹೆಸರು ನಾಪತ್ತೆ ಮಾಡುವುದರಲ್ಲಿ ಕಾಂಗ್ರೆಸಿಗರು ಪ್ರವೀಣರು. ಅಂದು ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ , ಇಂದು ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಕೈಚಳಕ ತೋರಿದ್ದಾರೆ ಎಂದು ಆರೋಪಿಸಿದರು.
ನಕಲಿ ಮತದಾನ ಮಾಡಿಸಿದ ಡಿ.ಕೆ.ಶಿವಕುಮಾರ್ ಅವರನ್ನು ಸಮರ್ಥಿಸಿದ ಎಸ್ಸೆಂ ಕೃಷ್ಣ ಬಹಳಷ್ಟು ಅಪಾಯಕಾರಿ. ರಾಜ್ಯದಲ್ಲಿ ನಡೆದ ಚುನಾವಣಾ ಹಿಂಸಾಚಾರ ಮತ್ತು ಅಕ್ರಮಗಳ ಕುರಿತು ಕೂಡಲೇ ತನಿಖೆ ನಡೆಸಬೇಕು ಎಂದು ಸಿದ್ಧರಾಮಯ್ಯ ಆಗ್ರಹಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ಕುರುಕ್ಷೇತ್ರ-2004
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications