ಪಾಕ್ನೆಲದಲ್ಲಿ ವಿಜಯಪತಾಕೆ-2: ಭಾರತಕ್ಕೆ ಜೂ. ಏಷ್ಯಾಕಪ್ ಹಾಕಿ
ಪಾಕ್ನೆಲದಲ್ಲಿ ವಿಜಯಪತಾಕೆ-2: ಭಾರತಕ್ಕೆ ಜೂ. ಏಷ್ಯಾಕಪ್ ಹಾಕಿ
ತುಷಾರ್ ಖಾಂಡೇಕರ್ ಹ್ಯಾಟ್ರಿಕ್ ಗೋಲು, 5-2 ಅಂತರದ ಜಯ
ಕರ್ನಾಟಕದ ಸಂದೀಪ್ ಮೈಕಲ್ ನೇತೃತ್ವದ ಭಾರತ ಜೂನಿಯರ್ ಹಾಕಿ ತಂಡ ಪಾಕಿಸ್ತಾನವನ್ನು ಅವರ ಮಣ್ಣಿನಲ್ಲೇ ಮಣಿಸುವ ಮೂಲಕ ಏಷ್ಯಾಕಪ್ ಗೆದ್ದಿದೆ. ಕರಾಚಿಯಲ್ಲಿ ಏಪ್ರಿಲ್ 29ರ ಗುರುವಾರ ನಡೆದ ಫೈನಲ್ ಪಂದ್ಯದಲ್ಲಿ ಭಾರತ 5-2 ಗೋಲುಗಳಿಂದ ಪಾಕ್ ತಂಡವನ್ನು ಮಣಿಸಿತು.
ಈ ಅಂತಿಮ ಪಂದ್ಯದಲ್ಲಿ ಭರವಸೆಯ ಫಾರ್ವರ್ಡ್ ಆಟಗಾರ ತುಷಾರ್ ಖಾಂಡೇಕರ್ ಹ್ಯಾಟ್ರಿಕ್ ಗೋಲು ಗಳಿಸಿದರು. ಸರಣಿಯಲ್ಲಿ ಅತಿ ಹೆಚ್ಚಿನ ಗೋಲು ದಾಖಲಿಸಿದ ಗೌರವಕ್ಕೆ ಪಾತ್ರರಾದ ಸಂದೀಪ್ ಸಿಂಗ್ ಇನ್ನೆರಡು ಗೋಲು ದಾಖಲಿಸಿದರು.
ಪಂದ್ಯದ ಆರಂಭದಿಂದಲೇ ಪಾಕಿಸ್ತಾನದ ವಿರುದ್ಧ ಭಾರತ ಸ್ಪಷ್ಟ ಮುನ್ನಡೆ ಸಾಧಿಸಿತ್ತು. ಅಂತಿಮ ಹಂತದಲ್ಲಿ ಪಾಕ್ ಆಟಗಾರರು ತಿರುಗೇಟು ನೀಡಲು ಪ್ರಯತ್ನಿಸಿದ್ದರಾದರೂ ಕಾಲ ಮಿಂಚಿ ಹೋಗಿತ್ತು. ಇದು ಏಷ್ಯಾಕಪ್ನಲ್ಲಿ ಭಾರತದ ಚೊಚ್ಚಲ ವಿಜಯ ದುಂದುಭಿ.
ತಂಡದ ಯಶಸ್ಸಿನ ಸಂತಸದಲ್ಲಿ ತೇಲಾಡುತ್ತಿದ್ದ ಕೋಚ್ ಹರೇಂದ್ರ ಸಿಂಗ್ ಅವರು ಭಾರತದಲ್ಲಿ ಹಾಕಿಗೆ ಉತ್ತಮ ಭವಿಷ್ಯವಿದೆ ಎಂಬುದನ್ನು ನಮ್ಮ ಆಟಗಾರರು ತೋರಿಸಿಕೊಟ್ಟಿದ್ದಾರೆ ಎಂದು ನುಡಿದರು.
(ಏಜನ್ಸೀಸ್)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications