ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಸ್ತೆ ಅಪಘಾತದಲ್ಲಿ ಪ್ರಸಾರ ಭಾರತಿ ಅಧ್ಯಕ್ಷ ಎಂ.ವಿ.ಕಾಮತ್‌ ಪಾರು

By Staff
|
Google Oneindia Kannada News

ರಸ್ತೆ ಅಪಘಾತದಲ್ಲಿ ಪ್ರಸಾರ ಭಾರತಿ ಅಧ್ಯಕ್ಷ ಎಂ.ವಿ.ಕಾಮತ್‌ ಪಾರು
ಮಂಗಳೂರು ಸಮೀಪ ಬಸ್ಸಿಗೆ ಡಿಕ್ಕಿ ಹೊಡೆದ ಕಾಮತರ ಕಾರು

ಮಣಿಪಾಲ : ಪ್ರಸಾರ ಭಾರತಿ ಅಧ್ಯಕ್ಷ , ನುರಿತ ಪತ್ರಕರ್ತ ಎಂ.ವಿ.ಕಾಮತ್‌ ಮಂಗಳೂರು ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪಾರಾಗಿದ್ದಾರೆ. ಅವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಮಂಗಳೂರು ವಿಮಾನ ನಿಲ್ದಾಣ ದಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಅವರ ಕಾರು ಖಾಸಗಿ ಬಸ್ಸಿಗೆ ಢಿಕ್ಕಿ ಹೊಡೆದು ಈ ಅವಘಡ (ಏ.30) ಸಂಭವಿಸಿದೆ.

ಕಾರಿನ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಈ ಅಫಘಾತ ಸಂಭವಿಸಿದೆ. ಕಾಮತ್‌ ಹಾಗೂ ಅವರ ಮತ್ತು ಕಾರಿನ ಚಾಲಕ ಮಣಿಪಾಲದ ಕೆಎಮ್‌ಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ನನಗೆ ಸಣ್ಣ-ಸಣ್ಣ ಗಾಯಗಳಾಗಿವೆ. ಚಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ. ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಬಹುದು ಎಂದು ಅಪಘಾತದ ಕುರಿತು ಕಾಮತ್‌ ಪ್ರತಿಕ್ರಿಯಿಸಿದ್ದಾರೆ.

ಎಂ.ವಿ. ಕಾಮತ್‌ ಟಿ.ಎಮ್‌.ಎ. ಪೈ. ಪ್ರತಿಷ್ಠಾನದ ಆಡಳಿತ ಮಂಡಳಿ ಸದಸ್ಯರು. ಪ್ರತಿಷ್ಠಾನದ ಸಂಸ್ಥಾಪಕರ ದಿನಾಚರಣೆ ಮತ್ತು ಕೆಎಮ್‌ಸಿ ಸಂಸ್ಥೆಯ ಸುವರ್ಣಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಅವರು ಆಗಮಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

(ಪಿಟಿಐ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X