Get Updates
Get notified of breaking news, exclusive insights, and must-see stories!

ರಸ್ತೆ ಅಪಘಾತದಲ್ಲಿ ಪ್ರಸಾರ ಭಾರತಿ ಅಧ್ಯಕ್ಷ ಎಂ.ವಿ.ಕಾಮತ್‌ ಪಾರು

ರಸ್ತೆ ಅಪಘಾತದಲ್ಲಿ ಪ್ರಸಾರ ಭಾರತಿ ಅಧ್ಯಕ್ಷ ಎಂ.ವಿ.ಕಾಮತ್‌ ಪಾರು
ಮಂಗಳೂರು ಸಮೀಪ ಬಸ್ಸಿಗೆ ಡಿಕ್ಕಿ ಹೊಡೆದ ಕಾಮತರ ಕಾರು

ಮಣಿಪಾಲ : ಪ್ರಸಾರ ಭಾರತಿ ಅಧ್ಯಕ್ಷ , ನುರಿತ ಪತ್ರಕರ್ತ ಎಂ.ವಿ.ಕಾಮತ್‌ ಮಂಗಳೂರು ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪಾರಾಗಿದ್ದಾರೆ. ಅವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಮಂಗಳೂರು ವಿಮಾನ ನಿಲ್ದಾಣ ದಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಅವರ ಕಾರು ಖಾಸಗಿ ಬಸ್ಸಿಗೆ ಢಿಕ್ಕಿ ಹೊಡೆದು ಈ ಅವಘಡ (ಏ.30) ಸಂಭವಿಸಿದೆ.

ಕಾರಿನ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಈ ಅಫಘಾತ ಸಂಭವಿಸಿದೆ. ಕಾಮತ್‌ ಹಾಗೂ ಅವರ ಮತ್ತು ಕಾರಿನ ಚಾಲಕ ಮಣಿಪಾಲದ ಕೆಎಮ್‌ಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ನನಗೆ ಸಣ್ಣ-ಸಣ್ಣ ಗಾಯಗಳಾಗಿವೆ. ಚಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ. ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಬಹುದು ಎಂದು ಅಪಘಾತದ ಕುರಿತು ಕಾಮತ್‌ ಪ್ರತಿಕ್ರಿಯಿಸಿದ್ದಾರೆ.

ಎಂ.ವಿ. ಕಾಮತ್‌ ಟಿ.ಎಮ್‌.ಎ. ಪೈ. ಪ್ರತಿಷ್ಠಾನದ ಆಡಳಿತ ಮಂಡಳಿ ಸದಸ್ಯರು. ಪ್ರತಿಷ್ಠಾನದ ಸಂಸ್ಥಾಪಕರ ದಿನಾಚರಣೆ ಮತ್ತು ಕೆಎಮ್‌ಸಿ ಸಂಸ್ಥೆಯ ಸುವರ್ಣಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಅವರು ಆಗಮಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

(ಪಿಟಿಐ)

ಮುಖಪುಟ / ವಾರ್ತೆಗಳು

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+