1200 ವರ್ಷದ ಚಂದ್ರಕಲಾಪರಮೇಶ್ವರಿದೇಗುಲಕ್ಕೆಕಾಯಕಲ್ಪ ಭಾಗ್ಯ
1200 ವರ್ಷದ ಚಂದ್ರಕಲಾಪರಮೇಶ್ವರಿದೇಗುಲಕ್ಕೆಕಾಯಕಲ್ಪ ಭಾಗ್ಯ
ಗುಲ್ಬರ್ಗಾ ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣಕ್ಕೆ ಹೊಸ ಉಸಿರು
ಶಹಾಬಾದ್ಗೆ 5 ಕಿಮೀ ದೂರದಲ್ಲಿರುವ ಚಂದ್ರಕಲಾ ದೇಗುಲವನ್ನು 1200 ವರ್ಷಗಳ ಹಿಂದೆ ಚಾಲುಕ್ಯ ದೊರೆಗಳು ನಿರ್ಮಿಸಿದ್ದರು. ದೇಶದಲ್ಲಿನ ಶಕ್ತಿ ದೇವತೆಗಳ ಮೂಲ ದೇಗುಲಗಳಲ್ಲಿ ಚಂದ್ರಕಲಾ ಪರಮೇಶ್ವರಿ ದೇಗುಲವೂ ಒಂದೆಂದೂ ನಂಬಲಾಗಿದೆ. ಪ್ರಸ್ತುತ ಕೂಡ ದೇಶದ ವಿವಿಧ ಭಾಗಗಳ ಭಕ್ತರು ಶಕ್ತಿದೇವತೆಯ ದೇವಸ್ಥಾನಕ್ಕೆ ಭೇಟಿ ಕೊಡುತ್ತಿದ್ದಾರೆ. ಪ್ರಸ್ತುತ, ದೇಗುಲದ ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ನವೀಕರಿಸಲಾಗಿದೆ.
ದೇಣಿಗೆಗಳ ಮೂಲಕ ಚಂದ್ರಕಲಾ ಪರಮೇಶ್ವರಿ ದೇಗುಲದ ನವೀಕರಣ ಕಾರ್ಯ ನಡೆದಿದೆ. ಈವರೆಗೆ ಸುಮಾರು 21 ಲಕ್ಷ ರುಪಾಯಿಗಳನ್ನು ದೇಗುಲದ ನವೀಕರಣಕ್ಕೆ ಖರ್ಚು ಮಾಡಲಾಗಿದೆ. ಈ ಹಣದಲ್ಲಿ ರಾಜ್ಯ ಸರ್ಕಾರ 5 ಲಕ್ಷ ರುಪಾಯಿ ನೀಡಿದೆ. ಧರ್ಮಸ್ಥಳದ ಶ್ರೀ ಮಂಜುನಾಥ ದೇಗುಲದಿಂದ ಕೂಡ 5 ಲಕ್ಷ ರುಪಾಯಿ ದೇಣಿಗೆ ಸಂಗ್ರಹವಾಗಿದೆ. ಉಳಿದ ಹಣವನ್ನು ಭಕ್ತಾದಿಗಳಿಂದ ದೇಣಿಗೆ ಮೂಲಕ ಸಂಗ್ರಹಿಸಲಾಗಿದೆ ಎಂದು ದೇಗುಲದ ಟ್ರಸ್ಟ್ನ ಕಾರ್ಯದರ್ಶಿ ವಸಂತರಾವ್ ಕುಲಕರ್ಣಿ ತಿಳಿಸಿದ್ದಾರೆ.
ಸಭಾ ಮಂಟಪ, ಈಶ್ವರ ಮತ್ತು ಮಾರುತಿ ಮಂದಿರ ಹಾಗೂ ಕಾಳಿಕಾದೇವಿ ಪಾದಗಟ್ಟೆಗಳ ನವೀಕರಣ ಕಾರ್ಯ ಮುಗಿದಿದ್ದು , ಸುಣ್ಣಬಣ್ಣದ ಕಾರ್ಯ ಬಾಕಿಯಿದೆ. ಏಪ್ರಿಲ್ನಲ್ಲೇ ನವೀಕರಣದ ಸಂಪೂರ್ಣ ಕಾಮಗಾರಿ ಮುಕ್ತಾಯವಾಗಲಿದ್ದು , ಮೇ 9ರಂದು ದೇಗುಲದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುವುದು.
ಅಂದಹಾಗೆ, ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಿ.ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಚಂದ್ರಕಲಾ ಪರಮೇಶ್ವರಿ ದೇಗುಲದ ನವೀಕರಣ ಕಾರ್ಯ ನಡೆದಿದೆ.
ಮುಂದಿನ ದಿನಗಳಲ್ಲಿ ಯಾತ್ರಾರ್ಥಿಗಳಿಗೊಂದು ಅತಿಥಿ ಗೃಹ ಹಾಗೂ ದೇಗುಲದ ಸುತ್ತಮುತ್ತ ಉದ್ಯಾನವೊಂದನ್ನು ಅಭಿವೃದ್ಧಿಪಡಿಸಲು ದೇಗುಲದ ಟ್ರಸ್ಟ್ ಉದ್ದೇಶಿಸಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications