Get Updates
Get notified of breaking news, exclusive insights, and must-see stories!

ಚಿತ್ರದುರ್ಗದಿ ದಲಿತ ಸಂಘಟನೆಗಳಿಂದ ಸಚಿವ ಡಿಕೆಶಿ ಪ್ರತಿಕೃತಿ ದಹನ

ಚಿತ್ರದುರ್ಗದಿ ದಲಿತ ಸಂಘಟನೆಗಳಿಂದ ಸಚಿವ ಡಿಕೆಶಿ ಪ್ರತಿಕೃತಿ ದಹನ
ಅಂಬೇಡ್ಕರ್‌ ಕಟೌಟಿಗೆ ಡಿಕೆಶಿ ಹಾಗೂ ಬೆಂಬಲಿಗರಿಂದ ಅವಮಾನ ?

ಚಿತ್ರದುರ್ಗ : ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್‌ ಪ್ರತಿಕೃತಿಯನ್ನು ದಹಿಸುವ ಮೂಲಕ ದಲಿತ ಸಂಘಟನೆಗಳು ಸಚಿವರ ನಡವಳಿಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ಸಚಿವ ಡಿ.ಕೆ.ಶಿವಕುಮಾರ್‌ ಇತ್ತೀಚೆಗೆ ಸಾತನೂರಿನಲ್ಲಿ ಸಂವಿಧಾನ ಇಲ್ಪಿ ಬಾಬಾ ಸಾಹೇಬ್‌ ಅಂಬೇಡ್ಕರ್‌ ಕಟೌಟಿಗೆ ಬೆಂಕಿ ಹಚ್ಚಿ ಅವಮಾನ ಮಾಡಿದ್ದಾರೆ ಎಂದು ಈ ಸಂಘಟನೆಗಳು ಆರೋಪಿಸಿವೆ. ಪ್ರತಿಭಟನಾಕಾರರು ನಗರದ ಪ್ರಮುಖ ಬೀದಿಯಲ್ಲಿ ಡಿಕೆಶಿ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿದರು. ಬಳಿಕ ಡಿಕೆಶಿ ಕೃತ್ಯವನ್ನು ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ವಿವಿಧ ದಲಿತ ಸಂಘಟನೆಯ ಮುಖಂಡರು ಈ ಪ್ರತಿಭಟನೆಯಲ್ಲಿ ಹಾಜರಿದ್ದರು.

ಶಿವಕುಮಾರ್‌ ವಿರುದ್ಧ ಸಾತನೂರಿನಲ್ಲಿ ಸ್ಪರ್ಧೆಯಾಡ್ಡಿರುವ ಬಹುಜನ ಸಮಾಜವಾದಿ ಪಕ್ಷದ ಮುನಿಯಪ್ಪ ಕೂಡ ಈ ಕುರಿತು ಪ್ರತಿಕ್ರಿಯೆ ನೀಡಿದ್ದು , ಅಂಬೇಡ್ಕರ್‌ ಅವರನ್ನು ಅವಮಾನಿಸಿರುವ ಶಿವಕುಮಾರ್‌ ಹಾಗೂ ಅವರ ಬೆಂಬಲಿಗರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಾಜ್ಯಸರ್ಕಾರವನ್ನು ಒತ್ತಾಯಿಸಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+