ಜನತೆಗೆ ನನ್ನ ಮುಖ ಇಷ್ಟವಾಗಿಲ್ಲ , ಸೋಲಿನ ಹೊಣೆ ಹೊರುವೆ -ಕೃಷ್ಣ
ಜನತೆಗೆ ನನ್ನ ಮುಖ ಇಷ್ಟವಾಗಿಲ್ಲ , ಸೋಲಿನ ಹೊಣೆ ಹೊರುವೆ -ಕೃಷ್ಣ
ತಮ್ಮ ನಾಯಕತ್ವ ಹಾಗೂ ಸರ್ಕಾರದ ಯೋಜನೆಗಳು ಜನರಿಗೆ ಇಷ್ಟವಾಗಿಲ್ಲ ಎಂದು ಅಭಿಪ್ರಾಯ ಪಟ್ಟಿರುವ ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ಪಕ್ಷದ ಸೋಲಿನ ನೈತಿಕ ಹೊಣೆ ಹೊತ್ತಿದ್ದಾರೆ.
ಮುಖ್ಯಮಂತ್ರಿ ಸ್ಥಾನ ಹಾಗೂ ಸರ್ಕಾರದ ರಾಜೀನಾಮೆಯನ್ನು ರಾಜ್ಯಪಾಲರಿಗೆ ಸಲ್ಲಿಸಿದ ನಂತರ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗಾರರೊಂದಿಗೆ ಮುಖಾಮುಖಿಯಾದ ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ - ಜನತೆ ನೀಡಿರುವ ತೀರ್ಪನ್ನು ಒಪ್ಪಿಕೊಳ್ಳುವುದಾಗಿ ಹೇಳಿದರು.
ರಾಜ್ಯದ ಜನತೆ ನನ್ನ ನಾಯಕತ್ವ ಹಾಗೂ ಸರ್ಕಾರದ ಯೋಜನೆಗಳನ್ನು ತಿರಸ್ಕರಿಸಿದ್ದಾರೆ ಎಂದು ನಂಬಿದ್ದೇನೆ. ರಾಜ್ಯದ ಜನತೆಗೆ ನನ್ನ ಮುಖ ಇಷ್ಟವಾಗಿಲ್ಲ . ಆ ಕಾರಣದಿಂದಾಗಿ ಸೋಲಿನ ನೈತಿಕ ಹೊಣೆ ಹೊರುವುದಾಗಿ ಕೃಷ್ಣ ಹೇಳಿದರು. ಕೇಂದ್ರದಲ್ಲಿ ಸೋನಿಯಾ ನಾಯಕತ್ವಕ್ಕೆ ದೊರೆತ ಮನ್ನಣೆ ತಮಗೆ ಪೂರ್ಣ ಸಮಾಧಾನ ತಂದಿದೆ ಎಂದು ಕೃಷ್ಣ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಜಾತ್ಯತೀತ ಜನತಾದಳದೊಂದಿಗೆ ಕೈ ಜೋಡಿಸುತ್ತೀರಾ ? ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೃಷ್ಣ - ಈ ಕುರಿತು ಸದ್ಯಕ್ಕೇನೂ ಹೇಳಲಾಗದು ಎಂದರು. ಜಾತ್ಯತೀತ ಜನತಾದಳ ಅಥವಾ ಇತರ ಯಾವುದೇ ಪಕ್ಷದ ನಾಯಕರನ್ನು ಸದ್ಯಕ್ಕೆ ಭೇಟಿ ಮಾಡುವುದಿಲ್ಲ ಎಂದು ಕೃಷ್ಣ ಹೇಳಿದರು.
ಮುಖ್ಯಮಂತ್ರಿ ಕೃಷ್ಣ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಆದರೆ, ಅವರ ಸಂಪುಟ ಸಹೋದ್ಯೋಗಿಗಳಾದ ಕಾಗೋಡು ತಿಮ್ಮಪ್ಪ, ಮೋಟಮ್ಮ, ವಸಂತ ಸಾಲಿಯಾನ, ಡಿ.ಬಿ.ಚಂದ್ರೇಗೌಡ, ಸುಮಾ ವಸಂತ್, ಟಿ.ಬಿ.ಜಯಚಂದ್ರ, ಸಗೀರ್ ಅಹಮದ್ ಹೀನಾಯ ಸೋಲುಂಡಿರುವುದು ಕಾಂಗ್ರೆಸ್ನ ತೀವ್ರ ಮುಖಭಂಗಕ್ಕೆ ಕಾರಣವಾಗಿದೆ.
(ಇನ್ಫೋ ವಾರ್ತೆ)
ಮುಖಪುಟ / ಕುರುಕ್ಷೇತ್ರ-2004
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications