ಸಮ್ಮಿಶ್ರಸರ್ಕಾರ! ಜೆಡಿಎಸ್ ಜೊತೆ ‘ಕೈ’ಕುಲುಕಲು ಕಾಂಗ್ರೆಸ್ ಬಯಕೆ
ಸಮ್ಮಿಶ್ರಸರ್ಕಾರ! ಜೆಡಿಎಸ್ ಜೊತೆ ‘ಕೈ’ಕುಲುಕಲು ಕಾಂಗ್ರೆಸ್ ಬಯಕೆ
ಸರ್ಕಾರ ರಚಿಸಲು ಬಿಜೆಪಿಯೂ ಆಸಕ್ತ , ಎಲ್ಲ ಅವಕಾಶಗಳೂ ಮುಕ್ತ
ಜಾತ್ಯತೀತ ಜನತಾದಳದೊಂದಿಗೆ ಮೈತ್ರಿಗೆ ಕಾಂಗ್ರೆಸ್ ಸಿದ್ಧವಿದೆ. ರಾಜ್ಯದಲ್ಲಿ ಜಾತ್ಯತೀತ ಸರ್ಕಾರವನ್ನು ರಚಿಸುವ ಉದ್ದೇಶದಿಂದ ಜೆಡಿಎಸ್ ಜೊತೆ ಸೇರಿ ಸಮ್ಮಿಶ್ರ ಸರ್ಕಾರ ರಚನೆಗೂ ಕಾಂಗ್ರೆಸ್ ಸಿದ್ಧವಿದೆ ಎಂದು ರಾಜ್ಯ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿ ನೋಡಿಕೊಳ್ಳುತ್ತಿರುವ ಪಕ್ಷದ ಹಿರಿಯ ಧುರೀಣ ವಿಲಾಸ್ರಾವ್ ದೇಶ್ಮುಖ್ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.
ಸಮ್ಮಿಶ್ರ ಸರ್ಕಾರ ಸ್ಥಾಪನೆಯ ಪ್ರಸ್ತಾಪವನ್ನು ಈಗಾಗಲೇ ದೇವೇಗೌಡರಿಗೆ ಕಳಿಸಿಕೊಟ್ಟಿದ್ದೇವೆ. ಈ ಕುರಿತು ಅವರ ಅಭಿಪ್ರಾಯವನ್ನು ನಿರೀಕ್ಷಿಸಲಾಗುತ್ತಿದೆ. ಶುಕ್ರವಾರ ಸಂಜೆ ದೇವೇಗೌಡರು ದೆಹಲಿಗೆ ತೆರಳುತ್ತಿದ್ದು , ಸರ್ಕಾರ ರಚನೆಯ ಕುರಿತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ಚರ್ಚಿಸುವ ನಿರೀಕ್ಷೆಯಿದೆ ಎಂದು ದೇಶ್ಮುಖ್ ಹೇಳಿದರು.
ವಿಲಾಸ್ರಾವ್ ದೇಶ್ಮುಖ್ ಹಾಗೂ ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ರಾಜ್ಯದ ರಾಜಕೀಯ ವಿದ್ಯಮಾನಗಳ ಕುರಿತು ಶುಕ್ರವಾರ ಚರ್ಚಿಸಿದರು.
ಬಿಜೆಪಿಯ ಆಶಾವಾದ : ರಾಜ್ಯ ವಿಧಾನಸಭೆಯಲ್ಲಿ ಏಕೈಕ ದೊಡ್ಡ ಪಕ್ಷವಾದ ಬಿಜೆಪಿ ಸರ್ಕಾರ ರಚಿಸುವ ಕುರಿತು ಆಶಾಭಾವನೆ ಹೊಂದಿದೆ. ಜಾತ್ಯತೀತ ಜನತಾದಳ ತನಗೆ ಬೆಂಬಲ ನೀಡುವ ಕುರಿತೂ ಬಿಜೆಪಿ ಆಶಾಭಾವ ವ್ಯಕ್ತಪಡಿಸಿದೆ. ರಾಜ್ಯ ಬಿಜೆಪಿ ವ್ಯವಹಾರಗಳ ಉಸ್ತುವಾರಿ ನೋಡಿಕೊಳ್ಳುತ್ತಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ ಶುಕ್ರವಾರ ಈ ಆಶಾಭಾವ ವ್ಯಕ್ತಪಡಿಸಿದರು.
ರಾಜ್ಯದ ಜನತೆ ಕಾಂಗ್ರೆಸ್ ವಿರುದ್ಧ ಮತ ಚಲಾಯಿಸಿದ್ದರು. ಆದ್ದರಿಂದ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಅಧಿಕಾರಕ್ಕೆ ಬರುವ ಕಾಂಗ್ರೆಸ್ ಪ್ರಯತ್ನಗಳು ಜನಾದೇಶಕ್ಕೆ ವಿರುದ್ಧವಾಗಿವೆ ಎಂದು ಜೇಟ್ಲಿ ಅಭಿಪ್ರಾಯಪಟ್ಟರು. ಸರ್ಕಾರ ರಚನೆಗೆ ಬಿಜೆಪಿ ಸರ್ವಯತ್ನವನ್ನೂ ನಡೆಸುವುದಾಗಿ ಅವರು ಹೇಳಿದರು.
ಈ ನಡುವೆ ಕೇಂದ್ರದಲ್ಲಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸರ್ಕಾರ ರಚಿಸುವ ಪ್ರಕಿಯೆಗೆ ಚಾಲನೆ ಸಿಕ್ಕಿದ್ದು , ದೆಹಲಿಯಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿವೆ.
(ಇನ್ಫೋ ವಾರ್ತೆ)
ಮುಖಪುಟ / ಕುರುಕ್ಷೇತ್ರ-2004
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications