ರಾಜ್ಯ ರಾಜಕಾರಣದಿ ಅಪ್ಪ ಮಕ್ಕಳ ಕಣ್ಣಾಮುಚ್ಚಾಲೆ ! ಲಾಭ ಯಾರಿಗೆ?
ರಾಜ್ಯ ರಾಜಕಾರಣದಿ ಅಪ್ಪ ಮಕ್ಕಳ ಕಣ್ಣಾಮುಚ್ಚಾಲೆ ! ಲಾಭ ಯಾರಿಗೆ? ಮತದಾರ ಪ್ರಭುವಿನ ಮಹತ್ವ ಸದ್ಯಕ್ಕೆ ಮುಗಿದ ಅಧ್ಯಾಯ. ಈಗ ರಾಜಕಾರಣಿಗಳ ಪಾಳಿ
ಬೆಂಗಳೂರು : ರಾಜ್ಯದ ಹಲವಾರು ಕ್ಷೇತ್ರಗಳಲ್ಲಿ ತಂದೆ ಮತ್ತು ಮಕ್ಕಳ ನಡುವಿನ ಜೊತೆಯಾಟವು ಉತ್ತಮ ಫಲಿತಾಂಶ ತರುವಲ್ಲಿ ಯಶಸ್ವಿಯಾಗಿದೆ. ಆದರೆ ಈ ಫಲಿತಾಂಶದ ಲಾಭ ಜನರಿಗೋ ಅಥವಾ ತಂದೆ ಮತ್ತು ಮಕ್ಕಳಿಗೋ ?
ಮಾಜಿ ಪ್ರಧಾನಿ ಮತ್ತು ಜಾತ್ಯತೀತ ಜನತಾದಳದ ಅಧ್ಯಕ್ಷ ಎಚ್.ಡಿ.ದೇವೆಗೌಡ ಅವರು ಹಾಸನ ಲೋಕಸಭೆ ಕ್ಷೇತ್ರದಿಂದ ಆರಿಸಿ ಬಂದಿದ್ದಾರೆ. ಅವರ ಮಕ್ಕಳಾದ ಎಚ್.ಡಿ. ರೇವಣ್ಣ ಹೊಳೆನರಸೀಪುರದಿಂದ ಮತ್ತು ಎಚ್.ಡಿ. ಕುಮಾರಸ್ವಾಮಿ ರಾಮನಗರ ವಿಧಾನಸಭಾ ಕ್ಷೇತ್ರದಿಂದ ಆರಿಸಿ ಬಂದಿದ್ದಾರೆ. ಗೌಡರಿಗೆ ಮುಜುಗರದ ವಿಷಯವೆಂದರೆ, ಕನಕಪುರ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಶ್ರೀರಾಮ್ ಎದುರಿನ ಹೀನಾಯ ಸೋಲು.
ಅಂತೆಯೇ, ಕಾಂಗ್ರೆಸ್ ಮುಖಂಡ ಆರ್.ಎಲ್. ಜಾಲಪ್ಪ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಪುನರಾಯ್ಕೆಯಾಗಿದ್ದಾರೆ. ಅವರ ಪುತ್ರ ಜೆ. ನರಸಿಂಹಸ್ವಾಮಿ ದೊಡ್ಡಬಳ್ಳಾಪುರವಿಧಾನಸಭಾ ಕ್ಷೇತ್ರದಿಂದ ಆರಿಸಿ ಬಂದಿದ್ದಾರೆ.
ಎಸ್. ಎಂ. ಕೃಷ್ಣ ಅವರ ಆಡಳಿತದಲ್ಲಿ ಕಂದಾಯ ಸಚಿವರಾಗಿದ್ದ ಎಚ್.ಸಿ. ಶ್ರೀಕಂಠಯ್ಯನವರು ಹಾಸನ ಲೋಕಸಭೆ ಕ್ಷೇತ್ರದಲ್ಲಿ ತಮ್ಮ ಸೀಟು ಕಳೆದುಕೊಂಡಿರುವುದು ಅವರಿಗಾದ ಕಹಿ ಅನುಭವವಾಗಿದೆ. ಶ್ರೀಕಂಠಯ್ಯನವರ ಮಗ ವಿಜಯಕುಮಾರ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿ ಪ್ರಯಾಸದ ಜಯಗಳಿಸಿದ್ದಾರೆ.
ಇನ್ನೊಬ್ಬ ಮಾಜಿ ಮಂತ್ರಿಗಳಾದ ಎಚ್.ಎನ್.ನಂಜೇಗೌಡ ಮತ್ತು ಮಗ ಪುರುಷೋತ್ತಮ ಅವರಿಬ್ಬರೂ ಮುಳುಗಡೆಯಾಗಿದ್ದಾರೆ. ನಂಜೇಗೌಡ ಹಾಸನ ಲೋಕಸಭಾ ಕ್ಷೇತ್ರದಲ್ಲೂ, ಮಗ ಪುರುಷೋತ್ತಮ ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲೂ ಸೋತ ಕುದುರೆಯ ಸವಾರರಾಗಿದ್ದಾರೆ.
ಹಿರಿಯ ಕಾಂಗ್ರೆಸ್ ಮುಖಂಡ ಶಾಮನೂರು ಶಿವಶಂಕರಪ್ಪ ದಾವಣಗೆರೆ ವಿಧಾನಸಭಾ ಕ್ಷೇತ್ರದಿಂದ ಆರಿಸಿ ಬಂದರೆ, ಅವರ ಪುತ್ರ- ಕೃಷ್ಣ ಸಂಪುಟದಲ್ಲಿ ಯುವಜನ ಸೇವಾ ಮತ್ತು ಕ್ರೀಡಾ ಸಚಿವರಾಗಿದ್ದ ಎಸ್.ಎಸ್. ಮಲ್ಲಿಕಾರ್ಜುನ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಸೋಲನ್ನಪ್ಪಿದ್ದಾರೆ.
ಇದು ರಾಜ್ಯ ರಾಜಕಾರಣದಲ್ಲಿ ಅಪ್ಪ ಮಕ್ಕಳ ಚದುರಂಗದಾಟ. ಇನ್ನು ಶಿವಮೊಗ್ಗದ ಬಂಗಾರಪ್ಪ ಹಾಗೂ ಅವರ ಮಕ್ಕಳ ನಡುವಣ ಕಣ್ಣಾಮುಚ್ಚಾಲೆ ಎಲ್ಲರಿಗೂ ಗೊತ್ತಿರುವಂತದ್ದೇ ? ಅಂದಹಾಗೆ, ಈ ತಂದೆ ಮಕ್ಕಳ ರಾಜಕೀಯ ಚದುರಂಗದಾಟದಲ್ಲಿ ಗೆಲುವು ಯಾರಿಗೆ ಸೋಲು ಯಾರಿಗೆ ಎಂಬುದಕ್ಕಿಂತ ಯಾರೇನು ಮಾಡುವರು ಜನಪದಕೆ ಎನ್ನುವುದು ಮುಖ್ಯವಲ್ಲವೆ ?(ಇನ್ಫೋ ವಾರ್ತೆ)
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು?












Click it and Unblock the Notifications