ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪತ್ರಕರ್ತ ದೇಶಹಳ್ಳಿ ಜಿ .ನಾರಾಯಣರಿಗೆ ಖಾದ್ರಿ ಶಾಮಣ್ಣ ಪ್ರಶಸ್ತಿ

By Staff
|
Google Oneindia Kannada News

ಪತ್ರಕರ್ತ ದೇಶಹಳ್ಳಿ ಜಿ .ನಾರಾಯಣರಿಗೆ ಖಾದ್ರಿ ಶಾಮಣ್ಣ ಪ್ರಶಸ್ತಿ
ಜೂನ್‌ 6ರಂದು ಮಂಡ್ಯದಲ್ಲಿ ಪ್ರಶಸ್ತಿ ಪ್ರದಾನ

ಬೆಂಗಳೂರು : ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದವರಿಗೆ ನೀಡಲಾಗುವ ಪ್ರತಿಷ್ಠಿತ ಖಾದ್ರಿ ಶಾಮಣ್ಣ ಪ್ರಶಸ್ತಿಗೆ ಹಿರಿಯ ಪತ್ರಕರ್ತ ದೇಶಹಳ್ಳಿ ಜಿ.ನಾರಾಯಣ ಅವರನ್ನು ಆಯ್ಕೆ ಮಾಡಲಾಗಿದೆ.

ಹಿರಿಯ ಪತ್ರಕರ್ತ ಎಸ್‌.ವಿ. ಜಯಶೀಲ ರಾವ್‌ ಅಧ್ಯಕ್ಷತೆಯ ಆಯ್ಕೆ ಸಮಿತಿ ಈ ನಿರ್ಣಯ ಕೈಗೊಂಡಿದೆ. ಖಾದ್ರಿ ಶಾಮಣ್ಣ ಅವರ ಜನ್ಮ ದಿನವಾದ ಜೂನ್‌6ರಂದು ಮಂಡ್ಯದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಖಾದ್ರಿ ಶಾಮಣ್ಣ ಪ್ರಶಸ್ತಿಯು ಹತ್ತು ಸಾವಿರ ನಗದು ಬಹುಮಾನ ಒಳಗೊಂಡಿದೆ ಎಂದು ಖಾದ್ರಿ ಶಾಮಣ್ಣ ಸ್ಮಾರಕ ಟ್ರಸ್ಟ್‌ನ ಕಾರ್ಯದರ್ಶಿ ಖಾದ್ರಿ ಅಚ್ಯುತನ್‌ ತಿಳಿಸಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X