Get Updates
Get notified of breaking news, exclusive insights, and must-see stories!

ನೂತನ ರಾಜ್ಯ ಸರ್ಕಾರ ರಚನೆ : ರಾಜ್ಯಪಾಲರು ಸಿದ್ಧರಾಮಯ್ಯ ಚರ್ಚೆ

ನೂತನ ರಾಜ್ಯ ಸರ್ಕಾರ ರಚನೆ : ರಾಜ್ಯಪಾಲರು ಸಿದ್ಧರಾಮಯ್ಯ ಚರ್ಚೆ
ಮೇ 20ರವರೆಗೆ ಕಾಂಗ್ರೆಸ್‌-ಬಿಜೆಪಿ ಕಾಲಾವಕಾಶ ಕೇಳಿಕೆ

ಬೆಂಗಳೂರು : ನೂತನ ರಾಜ್ಯ ಸರ್ಕಾರ ರಚನೆಯ ಸಾಧ್ಯತೆಗಳ ಕುರಿತು ರಾಜ್ಯಪಾಲ ಟಿ.ಎನ್‌.ಚತುರ್ವೇದಿ ಔಪಚಾರಿಕ ಚರ್ಚೆಗಳಿಗೆ ಚಾಲನೆ ನೀಡಿದ್ದಾರೆ.

ಸರ್ಕಾರ ರಚನೆಯ ಕುರಿತಂತೆ ಜೆಡಿಎಸ್‌, ಬಿಜೆಪಿ ಹಾಗೂ ಕಾಂಗ್ರೆಸ್‌ ರಾಜ್ಯಾಧ್ಯಕ್ಷರುಗಳಿಗೆ ರಾಜ್ಯಪಾಲ ಚತುರ್ವೇದಿ ಆಹ್ವಾನ ನೀಡಿದ್ದರು. ಈ ಆಹ್ವಾನವನ್ನು ಮನ್ನಿಸಿ ಜೆಡಿಎಸ್‌ ರಾಜ್ಯಾಧ್ಯಕ್ಷ ಹಾಗೂ ಮುಖ್ಯಮಂತ್ರಿ ಅಭ್ಯರ್ಥಿ ಸಿದ್ಧರಾಮಯ್ಯ ನೇತೃತ್ವದ ನಿಯೋಗ ಮಂಗಳವಾರ ರಾಜ್ಯಪಾಲರನ್ನು ಭೇಟಿ ಮಾಡಿತು.

ಕಾಂಗ್ರೆಸ್‌ ಬೆಂಬಲದೊಂದಿಗೆ ಸರ್ಕಾರ ರಚಿಸುವುದು ಖಚಿತ. ಈ ಕುರಿತು ಇನ್ನೆರಡು ಮೂರು ದಿನಗಳಲ್ಲಿ ಚಿತ್ರಣ ಸ್ಪಷ್ಟಗೊಳ್ಳಲಿದೆ ಎಂದು ಸಿದ್ಧರಾಮಯ್ಯ ರಾಜ್ಯಪಾಲರ ಭೇಟಿಯ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು ಎಂದು ರಾಜಭವನ ಮೂಲಗಳು ತಿಳಿಸಿವೆ.

ಬಿಜೆಪಿ ಹಾಗೂ ಕಾಂಗ್ರೆಸ್‌ ರಾಜ್ಯಪಾಲರನ್ನು ಭೇಟಿ ಮಾಡಿಲ್ಲ . ಈ ಕುರಿತು ಮೇ 20ರವರೆಗೆ ಸಮಯ ನೀಡುವಂತೆ ಎರಡೂ ಪಕ್ಷಗಳು ರಾಜ್ಯಪಾಲರನ್ನು ಕೋರಿವೆ.

(ಪಿಟಿಐ)

ಮುಖಪುಟ / ಕುರುಕ್ಷೇತ್ರ-2004

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+