ಕೊಡಗಿನಲ್ಲಿ ಸೂರ್ಯಗ್ರಹಣ ; ಮೇಘ ಮಲ್ಹಾರದಲ್ಲೊಂದು ಅಪಸ್ವರ
ಕೊಡಗಿನಲ್ಲಿ ಸೂರ್ಯಗ್ರಹಣ ; ಮೇಘ ಮಲ್ಹಾರದಲ್ಲೊಂದು ಅಪಸ್ವರ
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮಳೆ ಮಳೆ !
ಮೋಡಗಳ ಆರ್ಭಟದಿಂದಾಗಿ ಕೊಡಗಿನ ಸೂರ್ಯ ಮೋಡಗಳ ಮರೆಯಲ್ಲಿ ಅವಿತುಕೊಂಡಿದ್ದಾನೆ. ಇದು ಮಳೆಯ ಸಮಯ. ಧೋ ಧೋ ಮಳೆಯಿಂದಾಗಿ ಮೈದುಂಬಿದ ಕಾವೇರಿ ; ಜನತೆಯಲ್ಲಿ ಗರಿಗೆದರಿದ ಭರವಸೆ ಸಿರಿ.
ಮೇ 18, ಬುಧವಾರವಂತೂ ಮಳೆಗಾಳಿ ಮೇಳದೊಂದಿಗೆ ಮಡಿಕೇರಿಗೆ ಮಡಿಕೇರಿಯೇ ಗಡಗಡಗಡ. ಭಾಗಮಂಡಲ, ತಲಕಾವೇರಿ, ವಿರಾಜಪೇಟೆ ಹಾಗೂ ಸೋಮವಾರಪೇಟೆ ಪ್ರದೇಶಗಳಲ್ಲೂ ಉತ್ತಮ ಮಳೆಯಾಗುತ್ತಿದ್ದು , ಕಾವೇರಿಯಲ್ಲಿ ನೀರಿನ ಸೆಲೆ ಬಲಗೊಳ್ಳುತ್ತಿದೆ. ಕನ್ನಂಬಾಡಿ ಈ ಬಾರಿಯಾದರೂ ತುಂಬುವುದಾ ? ಹೊಸ ಸರ್ಕಾರ, ಹೊಸ ಭರವಸೆ- ಮಳೆರಾಯ ಕಣ್ಣು ತೆರೆದಾನಾ ?
ಮೇಘಮಲ್ಹಾರದಲ್ಲೊಂದು ಅಪಸ್ವರ :
ಭಾಗಮಂಡಲದ ಎನ್.ಡಾಲು ಎನ್ನುವ 40 ವರ್ಷದ ವ್ಯಕ್ತಿ ಏಕಾಏಕಿ ಹೆಚ್ಚಿದ ಪ್ರವಾಹದಲ್ಲಿ ಕೊಚ್ಚಿಹೋಗಿದ್ದಾನೆ. ಮೇ 17ರ ರಾತ್ರಿ ಉತ್ಸವವೊಂದರಲ್ಲಿ ಭಾಗಿಯಾಗಿದ್ದ ಡಾಲು ವಾಪಸ್ಸು ಬರುವಾಗ ಈ ದುರಂತ ಸಂಭವಿಸಿದೆ. ಭಾರೀ ಮಳೆ ಬೀಳುತ್ತಿರುವುದರಿಂದ ಮೃತದೇಹ ಪತ್ತೆ ಕಾರ್ಯದಲ್ಲಿ ಯಶಸ್ಸು ದೊರಕಿಲ್ಲ .
ಮಳೆ ಸುರಿಯುವುದು !
ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಗುರುವಾರ ಹಾಗೂ ಶುಕ್ರವಾರ ಭಾರೀ ಮಳೆ ಸುರಿಯುವ ಕುರಿತು ಹವಾಮಾನ ಇಲಾಖೆ ಸೂಚನೆ ನೀಡಿದೆ. ಆಗ್ನೇಯ ಮುಂಗಾರು ಆರಂಭಗೊಂಡಿದ್ದು , ಗುಡುಗು ಸಿಡಿಲು ಬೆರೆತ ಸುರಿಮಳೆ ಕರ್ನಾಟಕ, ತಮಿಳುನಾಡು, ಕೇರಳ, ಲಕ್ಷದ್ವೀಪಗಳಲ್ಲಿ ಬೀಳಲಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications