ಅಪವಿತ್ರ ಮೈತ್ರಿ ದೂರವಿಡಿ, ಎನ್ಡಿಎಗೆ ಅವಕಾಶ ಕೊಡಿ -ಜೆಡಿಯು
ಅಪವಿತ್ರ ಮೈತ್ರಿ ದೂರವಿಡಿ, ಎನ್ಡಿಎಗೆ ಅವಕಾಶ ಕೊಡಿ -ಜೆಡಿಯು
ಹಠಮಾರಿ ಕಾಂಗ್ರೆಸ್ಗೆ ಎಂ.ಪಿ.ಪ್ರಕಾಶ್ ಎಚ್ಚರಿಕೆ
ಸಂಯುಕ್ತ ಜನತಾದಳದ ರಾಜ್ಯಾಧ್ಯಕ್ಷ ಬಿ.ಸೋಮಶೇಖರ್ ನೇತೃತ್ವದಲ್ಲಿ ಪಕ್ಷದ ನಿಯೋಗ ರಾಜ್ಯಪಾಲ ಟಿ.ಎನ್.ಚತುರ್ವೇದಿ ಅವರನ್ನು ಬುಧವಾರ (ಮೇ 19) ಭೇಟಿ ಮಾಡಿತು. ವಿಧಾನಸಭೆ ಚುನಾವಣೆಗಳಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಯನ್ನು ಸರ್ಕಾರ ರಚಿಸಲು ಆಹ್ವಾನಿಸಬೇಕು ಎಂದು ಭೇಟಿಯ ಕಾಲದಲ್ಲಿ ನಿಯೋಗ ಒತ್ತಾಯಿಸಿತು.
ಹೊಸ ಸರ್ಕಾರ ರಚಿಸುವಲ್ಲಿ ಇನ್ನೂ ವಿಳಂಬವಾಗಬಾರದು. ಅಧಿಕಾರಗ್ರಹಣಕ್ಕಗಿ ಅಪವಿತ್ರ ಹಾಗೂ ಅನೈತಿಕ ಮೈತ್ರಿಗೆ ಅವಕಾಶ ನೀಡಬಾರದು ಎಂದು ರಾಜ್ಯಪಾಲರಿಗೆ ಒತ್ತಿ ಹೇಳಿದುದಾಗಿ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್ ಹೇಳಿದರು.
ನಮ್ಮ ದಾರಿ ನಮಗೆ -ಎಂ.ಪಿ.ಪ್ರಕಾಶ್
ಮುಖ್ಯಮಂತ್ರಿ ಸ್ಥಾನವನ್ನು ಜಾತ್ಯತೀತ ಜನತಾದಳಕ್ಕೆ ಕಾಂಗ್ರೆಸ್ ಬಿಟ್ಟುಕೊಡದಿದ್ದಲ್ಲಿ ನಮ್ಮ ದಾರಿ ನಾವು ನೋಡಿಕೊಳ್ಳುವುದಾಗಿ ಜೆಡಿಎಸ್ ಮುಖಂಡ ಎಂ.ಪಿ.ಪ್ರಕಾಶ್ ಎಚ್ಚರಿಸಿದ್ದಾರೆ.
ಹಠ ಮಾಡಿಕೊಂಡು ಕೂತರೆ ಪ್ರಯೋಜನವಿಲ್ಲ . ಸರ್ಕಾರ ರಚನೆಗಾಗಿ ಎರಡೂ ಪಕ್ಷಗಳು ಸ್ವಲ್ಪ ತ್ಯಾಗ ಮಾಡುವುದು ಅನಿವಾರ್ಯ. ಆದರೆ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿರುವುದರಿಂದ ಮುಖ್ಯಮಂತ್ರಿಪಟ್ಟ ಜೆಡಿಎಸ್ಗೇ ಸಲ್ಲಬೇಕು ಎಂದು ಪ್ರಕಾಶ್ ಅಭಿಪ್ರಾಯಪಟ್ಟಿದ್ದಾರೆ. ಕಾಂಗ್ರೆಸ್ ತಮ್ಮ ಕೋರಿಕೆಗೆ ಧನಾತ್ಮಕವಾಗಿ ಸ್ಪಂದಿಸದಿದ್ದಲ್ಲಿ ಜೆಡಿಎಸ್ ಅನಿವಾರ್ಯವಾಗಿ ಬೇರೆ ದಾರಿ ಹುಡುಕಲಿದೆ ಎಂದೂ ಅವರು ಹೇಳಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಕುರುಕ್ಷೇತ್ರ-2004
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications