ಹಳ್ಳಿಗಳತ್ತ ಗಮನ, ರೈತನ ಸಮಸ್ಯೆಗಳ ಪರಿಹಾರಕ್ಕೆ ಒತ್ತು -ಧರ್ಮಸಿಂಗ್
ಹಳ್ಳಿಗಳತ್ತ ಗಮನ, ರೈತನ ಸಮಸ್ಯೆಗಳ ಪರಿಹಾರಕ್ಕೆ ಒತ್ತು -ಧರ್ಮಸಿಂಗ್
ಸೈದ್ಧಾಂತಿಕ ರಾಜಿಯಿಲ್ಲ - ಸಿದ್ಧರಾಮಯ್ಯ ಸ್ಪಷ್ಟನೆ
ಜನ ಪರವಾದ ಕೆಲಸ, ಜನ ಹಿತ ಕಾಯ್ದುಕೊಳ್ಳುವ ಜವಾಬ್ದಾರಿ ಸರ್ಕಾರದ ಮೇಲಿದೆ. ಎಲ್ಲಕ್ಕಿಂತ ಮುಖ್ಯವಾಗಿ ರೈತರ ಹಿತಾಸಕ್ತಿಯನ್ನು ಕಾಪಾಡಬೇಕಿದೆ. ರೈತರಿದ್ದರೆ ನಾವು. ರೈತರ ಆಶೋತ್ತರಗಳನ್ನು ಅರಿತು, ಅವರ ಕುಂದು ಕೊರತೆಗಳ ನಿವಾರಣೆಗೆ ನಾನು ಮೊದಲ ಆದ್ಯತೆ ಕೊಡುತ್ತೇನೆ. ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಜೆಡಿಎಸ್ ಜೊತೆ ಜೊತೆಯಾಗಿ ಕಾರ್ಯ ನಿರ್ವಹಿಸುತ್ತೇವೆ ಎಂದು ಧರ್ಮಸಿಂಗ್ ತಮ್ಮ ಚೊಚ್ಚಿಲ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಜ್ವಲಂತ ಸಮಸ್ಯೆಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ. ದೇವರಾಜ್ ಅರಸು ಅವರು ಯಾವ ತೆರನಾದ ಸಾಮಾಜಿಕ ನ್ಯಾಯ ಒದಗಿಸಿದ್ದರೋ ಅದೇ ರೀತಿ ಜನಪರ ಕಾರ್ಯದಲ್ಲಿ ತೊಡಗಲಿದ್ದೇವೆ ಎಂದು ನೂತನ ಮುಖ್ಯಮಂತ್ರಿ ಧರ್ಮಸಿಂಗ್ ನುಡಿದರು.
ರಾಜ್ಯದ ಹಿತಾಸಕ್ತಿಗಾಗಿ ತ್ಯಾಗ : ರಾಜ್ಯದ ಹಿತಾಸಕ್ತಿಗಾಗಿ ಮುಖ್ಯಮಂತ್ರಿ ಪದವನ್ನು ತ್ಯಾಗಮಾಡಬೇಕಾಯಿತು. ಪಕ್ಷದ ಶಿಸ್ತಿನ ಸಿಪಾಯಿಯಾಗಿ ವರಿಷ್ಠರ ತೀರ್ಮಾನಕ್ಕೆ ತಲೆ ಬಾಗಿದ್ದೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದೊಳಗೆ ಕಾಂಗ್ರೆಸ್ನೊಂದಿಗೆ ಜೆಡಿಎಸ್ ಕಾರ್ಯ ನಿರ್ವಹಿಸುತ್ತದೆ. ಆದರೆ ವಿಧಾನಸೌಧದ ಹೊರಗೆ ಸೈದ್ಧಾಂತಿಕ ಸಂಘರ್ಷ ಮುಂದುವರಿಯುತ್ತದೆ. ಯಾವುದೇ ವಿಷಯದಲ್ಲಿ ಜೆಡಿಎಸ್ ರಾಜಿಗೊಳಗಾಗದು ಎಂದು ಸಿದ್ಧರಾಮಯ್ಯ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications