ಮುಂದಿನ ವಾರದ ಕಸರತ್ತಿಗೆ ‘ಸಂಪುಟ ವಿಸ್ತರಣೆ’ -ಎನ್.ಧರ್ಮಸಿಂಗ್
ಮುಂದಿನ ವಾರದ ಕಸರತ್ತಿಗೆ ‘ಸಂಪುಟ ವಿಸ್ತರಣೆ’ -ಎನ್.ಧರ್ಮಸಿಂಗ್
ನರಹಂತಕ ವೀರಪ್ಪನ್ ಬಂಧನಕ್ಕೆ ಶೀಘ್ರದಲ್ಲೇ ಕ್ರಿಯಾ ಯೋಜನೆ
34 ಸದಸ್ಯರ ಸಂಪುಟ ರಚಿಸಲಾಗುವುದು. ಸಚಿವ ಸ್ಥಾನಗಳನ್ನು ಕಾಂಗ್ರೆಸ್ ಹಾಗೂ ಜಾತ್ಯತೀತ ಜನತಾದಳ ಸಮನಾಗಿ ಹಂಚಿಕೊಳ್ಳಲಿವೆ ಎಂದು ಶನಿವಾರ (ಮೇ 29) ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಧರ್ಮಸಿಂಗ್ ಹೇಳಿದರು.
ಪ್ರಸ್ತುತ ಬೆಂಗಳೂರಿನಲ್ಲಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ನ ವ್ಯವಹಾರಗಳ ಉಸ್ತುವಾರಿ ಹೊತ್ತಿರುವ ವಿಲಾಸರಾವ್ ದೇಶಮುಖ್ ಅವರೊಂದಿಗೆ ಸಂಪುಟ ರಚನೆ ಕುರಿತು ಚರ್ಚೆ ನಡೆಸಲಾಗುತ್ತದೆ. ಮೇ 31ರಂದು ತಾವು ದೆಹಲಿಗೆ ಹೋಗಲು ಉದ್ದೇಶಿಸಿದ್ದು , ಸೋನಿಯಾಗಾಂಧಿ ಅವರೊಂದಿಗೆ ಸಂಪುಟ ಸದಸ್ಯರ ಕುರಿತು ಚರ್ಚೆ ನಡೆಸಲಾಗುತ್ತದೆ ಎಂದು ಧರ್ಮಸಿಂಗ್ ಹೇಳಿದರು.
ಬರುವ ವಾರಾಂತ್ಯದಲ್ಲಿ ಸಂಪುಟ ರಚಿಸುವ ಕುರಿತು ಉಪ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರೊಂದಿಗೆ ಚರ್ಚಿಸಲಾಗುವುದು ಎಂದು ಸಿದ್ದರಾಮಯ್ಯ ಶನಿವಾರ ತಿಳಿಸಿದರು.
ವೀರಪ್ಪನ್ ಸೆರೆಗೆ ಯೋಜನೆ : ನರಹಂತಕ ವೀರಪ್ಪನ್ ಬಂಧನಕ್ಕೆ ಶೀಘ್ರದಲ್ಲೇ ಕ್ರಿಯಾ ಯೋಜನೆಯಾಂದನ್ನು ರಚಿಸಲಾಗುವುದು ಎಂದು ನೂತನ ಮುಖ್ಯಮಂತ್ರಿ ಧರ್ಮಸಿಂಗ್ ಹೇಳಿದರು. ವೀರಪ್ಪನ್ ಶಿಕಾರಿಗೆ ಯಾವುದೇ ಸಮಯ ನಿಗದಿಪಡಿಸಲು ನಿರಾಕರಿಸಿದ ಧರ್ಮಸಿಂಗ್, ಇದೊಂದು ಅತ್ಯಂತ ಸೂಕ್ಷ್ಮ ವಿಷಯವಾಗಿದೆ ಎಂದು ಬಣ್ಣಿಸಿದರು.
(ಪಿಟಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications