ನನ್ನ ಜಿಲ್ಲೆಯ 1.53 ಲಕ್ಷ ಎಕರೆ ಭೂಮಿ ಬಾಯಾರಿದೆ - ಧರ್ಮಸಿಂಗ್
ನನ್ನ ಜಿಲ್ಲೆಯ 1.53 ಲಕ್ಷ ಎಕರೆ ಭೂಮಿ ಬಾಯಾರಿದೆ - ಧರ್ಮಸಿಂಗ್
ಸಮ್ಮಿಶ್ರ ಸರ್ಕಾರ ನಿಭಾಯಿಸುವಲ್ಲಿ ಏನೇನೂ ತೊಂದರೆಯಿಲ್ಲ , ಕಷ್ಟವೂ ಇಲ್ಲ
ಸಮ್ಮಿಶ್ರ ಸರ್ಕಾರವನ್ನು ತೂಗಿಸಿಕೊಂಡು ಹೋಗುವುದು ಕಷ್ಟವೆಂದು ತಾವು ಭಾವಿಸುವುದಿಲ್ಲ ಎಂದು ಮೇ 31ರ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಧರ್ಮಸಿಂಗ್ ಹೇಳಿದರು. ಸರ್ಕಾರದ ಮುಖ್ಯಸ್ಥನಾಗಿ ತಮ್ಮ ಒಲವು ನಿಲುವು ಹಾಗೂ ಕನಸುಗಳನ್ನು ಸಿಂಗ್ ಹಂಚಿಕೊಂಡರು.
ನೀರಾವರಿ ಯೋಜನೆಗಳನ್ನು ಹೆಚ್ಚಿಸುವುದು, ಉತ್ತಮ ಗುಣಮಟ್ಟದ ವಿದ್ಯುತ್ ಸರಬರಾಜು ಹಾಗೂ ಪಂಚಾಯತ್ಗಳ ಸಮರ್ಪಕ ನಿರ್ವಹಣೆ ಸಮ್ಮಿಶ್ರ ಸರ್ಕಾರದ ಆದ್ಯತೆಯ ವಿಷಯಗಳು. ಕೃಷ್ಣ ಮೇಲ್ದಂಡೆ ಯೋಜನೆಗಳಿಗಾಗಿ ಸರ್ಕಾರ ಈಗಾಗಲೇ ಸಾಕಷ್ಟು ಸಂಪನ್ಮೂಲಗಳನ್ನು ಖರ್ಚು ಮಾಡಿದೆ. ಆದರೆ, ತಮ್ಮ ತವರು ಜಿಲ್ಲೆಯಾದ ಗುಲ್ಬರ್ಗಾದಲ್ಲಿ 1.53 ಲಕ್ಷ ಎಕರೆ ಪ್ರದೇಶ ನೀರಿಗಾಗಿ ಬಾಯ್ತೆರೆದು ಕಾದಿದೆ ಎಂದು ಧರ್ಮಸಿಂಗ್ ಹೇಳಿದರು.
ಗ್ರಾಮ ಪಂಚಾಯ್ತಿಗಳು ಇನ್ನಷ್ಟು ಕ್ರಿಯಾಶೀಲವಾಗಬೇಕಿವೆ. ಸಂವಿಧಾನದ 72 ಮತ್ತು 73ನೇ ವಿಧಿಯ ಪ್ರಕಾರ ಅಧಿಕಾರದ ವಿಕೇಂದ್ರಿಕರಣವನ್ನು ಸಾಧಿಸಲಾಗಿದೆ. ಆದರೆ ಪಂಚಾಯಿತಿಗಳು ಇನ್ನಷ್ಟು ದಕ್ಷವಾಗಿ, ಜನಪರವಾಗಿ ಕೆಲಸ ಮಾಡಬೇಕು. ಸರ್ಕಾರದಿಂದ ಪ್ರತಿ ಪಂಚಾಯಿತಿಗೂ 5 ಲಕ್ಷ ರುಪಾಯಿ ಅನುದಾನ ದೊರೆಯುತ್ತಿದ್ದು , ಜನರಿಗೆ ಸ್ಪಂದಿಸುವಂತೆ ಪಂಚಾಯಿತಿಗಳ ಕಾರ್ಯ ವೈಖರಿ ರೂಪುಗೊಳ್ಳಬೇಕಿದೆ ಎಂದು ಧರ್ಮಸಿಂಗ್ ತಿಳಿಸಿದರು.
ಪೂರ್ಣ ಪ್ರಮಾಣದಲ್ಲಿ ಸಂಪುಟ ರಚನೆಯಾದ ನಂತರ ವಿವಿಧ ಅಭಿವೃದ್ಧಿ ಯೋಜನೆಗಳ ಬಗ್ಗೆ ಖಚಿತ ತೀರ್ಮಾನ ಕೈಗೊಳ್ಳುವುದಾಗಿ ಧರ್ಮಸಿಂಗ್ ಹೇಳಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications