ಸುಪ್ರೀಂಕೋಟ್ ಮುಖ್ಯ ನ್ಯಾಯಮೂರ್ತಿಯಾಗಿ ರಮೇಶ್ ಲಾಹೋಟಿ
ಸುಪ್ರೀಂಕೋಟ್ ಮುಖ್ಯ ನ್ಯಾಯಮೂರ್ತಿಯಾಗಿ ರಮೇಶ್ ಲಾಹೋಟಿ
ತಾಯಿಯೇ ದೇವರೆಂದರು ನ್ಯಾಯಮೂರ್ತಿ
ನ್ಯಾಯಮೂರ್ತಿ ಲಾಹೋಟಿ ಅವರಿಗೆ ರಾಷ್ಟಪತಿ ಎ.ಪಿ.ಜೆ. ಅಬ್ದುಲ್ ಕಲಾಂ ಅವರು ಅಧಿಕಾರ ಹಾಗೂ ಗೋಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಲಹೋಟಿ ದೇವರ ಹೆಸರಿನಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ನಿಕಟಪೂರ್ವ ಮುಖ್ಯ ನ್ಯಾಯಮೂರ್ತಿ ಎಸ್. ರಾಜೇಂದ್ರ ಬಾಬು, ಉಪ ರಾಷ್ಟ್ರಪತಿ ಶೆಖಾವತ್, ಪ್ರಧಾನಿ ಮನಮೋಹನ ಸಿಂಗ್ ಮತ್ತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಹಾಜರಿದ್ದರು.
ಪ್ರಮಾಣವಚನ ಸ್ವೀಕರಿಸಿದ ತಕ್ಷಣ ನ್ಯಾಯಮೂರ್ತಿ ಲಾಹೋಟಿಯವರು, ಸುಮಾರು 200ಕ್ಕೂ ಹೆಚ್ಚಿನ ಗಣ್ಯರ ಸಮ್ಮುಖದಲ್ಲೇ ತಮ್ಮ ತಾಯಿಯವರ ಕಾಲಿಗೆರಗಿ ಆಶೀರ್ವಾದ ಪಡೆದರು. ನನ್ನೆಲ್ಲ ಉನ್ನತಿ, ಸಾಧನೆಯ ಹಿರಿಮೆಗಳೆಲ್ಲ ನನ್ನ ಮಾತಾಪಿತೃಗಳಿಗೇ ಸಲ್ಲಬೇಕು. ದೇವರು ತಂದೆ ತಾಯಿಯ ರೂಪದಲ್ಲೇ ಜನರನ್ನು ಹರಸುವುದು ಎಂದು ಲಾಹೋಟಿಯವರು ಭಾವೋದ್ವೇಗದಿಂದ ನುಡಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಇತರ ಗಣ್ಯರ ಪೈಕಿ ಗೃಹ ಮಂತ್ರಿ ಶಿವರಾಜ್ ಪಾಟೀಲ್, ಮಾನವ ಸಂಪನ್ಮೂಲ ಇಲಾಖಾ ಮಂತ್ರಿ ಅರ್ಜುನ್ ಸಿಂಗ್, ಹಣಕಾಸು ಮಂತ್ರಿ ಪಿ. ಚಿದಂಬರಂ, ಕಾನೂನು ಮಂತ್ರಿ ಎಚ್. ಆರ್. ಭಾರದ್ವಜ್, ತೈಲ ಉತ್ಪನ್ನಗಳ ಮಂತ್ರಿ ಮಣಿ ಶಂಕರ್ ಅಯ್ಯರ್, ಮತ್ತು ಸಾಮಾಜಿಕ ನ್ಯಾಯ ಮಂತ್ರಿ ಮೇರ್ ಕುಮಾರ್ ಪ್ರಮುಖರು.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications