ಭಾಷಾ ಅಲ್ಪಸಂಖ್ಯಾತರಿಗೆ ಪ್ರಾದೇಶಿಕ ಭಾಷೆ ಕಡ್ಡಾಯ: ಸು.ಕೋರ್ಟ್
ಭಾಷಾ ಅಲ್ಪಸಂಖ್ಯಾತರಿಗೆ ಪ್ರಾದೇಶಿಕ ಭಾಷೆ ಕಡ್ಡಾಯ: ಸು.ಕೋರ್ಟ್
ಯಾವುದೇ ಭಾಷೆ ಕಲಿಕೆಯು ದೇಶದ ಏಕತೆಗೆ ಕೊಡುಗೆ
ಈ ನಿರ್ಣಯದಿಂದಾಗಿ ಯಾವುದೇ ರೀತಿಯಲ್ಲಿ ಶೈಕ್ಷಣಿಕ ಸಂಸ್ಥೆಗಳನ್ನು ನಡೆಸುವ ಅಲ್ಪಸಂಖ್ಯಾತರ ಮೂಲಭೂತ ಹಕ್ಕಿನ ಉಲ್ಲಂಘನೆ ಆಗದು ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.
ಮಹಾರಾಷ್ಟ್ರ ಸರಕಾರದ ವಿರುದ್ಧ ಗುಜರಾತಿಗಳ ಶಿಕ್ಷಣ ಸಂಸ್ಥೆಯಾಂದು ಸಲ್ಲಿಸಿದ್ದ ತಕರಾರು ಅರ್ಜಿಯ ವಿಚಾರಣೆ ನಡೆಸಿದ ಪೀಠವು ಮೇ 31ರ ಸೋಮವಾರ ಈ ಮಹತ್ವದ ತೀರ್ಪನ್ನು ನೀಡಿದೆ. ಮುಖ್ಯ ನ್ಯಾಯಮೂರ್ತಿ ಎಸ್.ರಾಜೇಂದ್ರ ಬಾಬು, ನ್ಯಾ। ಎ.ಆರ್.ಲಕ್ಷ್ಮಣನ್ ಮತ್ತು ನ್ಯಾ।ಜಿ.ಪಿ. ಮಾಥೂರ್ ಅವರಿದ್ದ ವಿಚಾರಣಾ ಪೀಠವು ವಿಚಾರಣೆ ನಡೆಸಿ ತೀರ್ಪು ನೀಡಿದೆ.
ಒಂದು ರಾಜ್ಯದಲ್ಲಿ ಬದುಕುತ್ತಿರುವ ಭಾಷಾ ಅಲ್ಪಸಂಖ್ಯಾತರು ಅಲ್ಲಿನ ಪ್ರಾದೇಶಿಕ ಭಾಷೆ ಕಲಿಯದಿದ್ದರೆ ಮುಖ್ಯ ವಾಹಿನಿಯಿಂದ ದೂರವಾಗುವ ಅಪಾಯವಿದೆ. ಇದು ರಾಷ್ಟ್ರದ ಏಕತೆಗೆ ಅಪಾಯ. ವಾಸ್ತವವಾಗಿ ಹೆಚ್ಚು ಹೆಚ್ಚು ಭಾಷೆ ಕಲಿಯುವುದರಿಂದ ದೇಶದ ಐಕ್ಯತೆಗೆ ಕೊಡುಗೆ ನೀಡಿದಂತಾಗುತ್ತದೆ ಎಂದು ಹೇಳಿದೆ.
ಸಂವಿಧಾನದ 29 ಮತ್ತು 30ನೇ ವಿಧಿ ಭಾಷಾ ಅಲ್ಪಸಂಖ್ಯಾತರಿಗೆ ಮೂಲಭೂತ ಹಕ್ಕುಗಳನ್ನು ನೀಡಿದೆ. ಅಂದ ಮಾತ್ರಕ್ಕೆ ತಾವು ವಾಸಿಸುವ ಪ್ರದೇಶದ ನಿಯಮಾವಳಿಗಳಿಂದ ವಿನಾಯಿತಿ ಪಡೆದುಕೊಳ್ಳುವ ಅವಕಾಶ ನೀಡಿದಂತಾಗುವುದಿಲ್ಲ. ವಿಧಿಯನ್ನು ಋಣಾತ್ಮಕವಾಗಿ ಪರಿಗಣಿಸುವುದು ಸರಿಯಲ್ಲ ಎಂದು ತೀರ್ಪಿನಲ್ಲಿ ತಿಳಿಸಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications