ಬೆಂಗಳೂರಿನಲ್ಲಿ ‘ಮಾಯದಂಥ ಮಳೆ’ ಬಂತಣ್ಣ ! ಆರು ಮಂದಿ ನಾಪತ್ತೆ
ಬೆಂಗಳೂರಿನಲ್ಲಿ ‘ಮಾಯದಂಥ ಮಳೆ’ ಬಂತಣ್ಣ ! ಆರು ಮಂದಿ ನಾಪತ್ತೆ
ಹತ್ತು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ದಾಖಲೆ ಮಳೆ
ಮೇ 31, ಸೋಮವಾರ ಸಂಜೆಯ ಅಫಿಷಿಯಲ್ ಮಳೆ ಬೆಂಗಳೂರೆಂಬ ಬೆಂಗಳೂರು ನಗರವನ್ನೇ ನಡುಗಿಸುವಂತಿತ್ತು. ಗುಡುಗು ಸಿಡಿಲಿನಾರ್ಭಟದೊಂದಿಗೆ ಸುರಿದ ಭಾರೀ ಮಳೆಯಲ್ಲಿ ಆರು ಮಂದಿ ನಾಪತ್ತೆಯಾಗಿದ್ದು ,ನೂರಕ್ಕೂ ಹೆಚ್ಚಿನ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಕೆ.ಆರ್. ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು, ತುಂಬಿ ಹರಿಯುತ್ತಿದ್ದ ಚರಂಡಿ ನೀರಿನ ಸೆಳೆತಕ್ಕೆ ಸಿಕ್ಕು, ಕೊಚ್ಚಿಕೊಂಡು ಹೋಗಿದ್ದಾರೆ. ಜೀವನಭೀಮಾನಗರದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಇಬ್ಬರು ಬಾಲಕರು ಚರಂಡಿ ನೀರಿನ ಪಾಲಾಗಿದ್ದಾರೆ.
ಕಳೆದ ಹತ್ತು ವರ್ಷಗಳಲ್ಲಿ ಈ ತೆರನಾದ ಭಾರೀ ಪ್ರಮಾಣದ ಮಳೆ ಕಂಡು ಬಂದಿದ್ದು ಇದೇ ಮೊದಲು. ರಾತ್ರಿಯ ವೇಳೆಗೆ ಧಾರಾಕಾರವಾಗಿ ಸುರಿದ ಮಳೆಯಿಂದ ನಗರದ ತಗ್ಗು ಪ್ರದೇಶಗಳ ಮನೆಗಳು ಸಂಪೂರ್ಣ ಜಲಾವೃತವಾಗಿದ್ದವು. ಸರಾಸರಿ 50ಮಿ.ಮೀ. ಮಳೆಯಾಗಿದ್ದು ಜನಜೀವನ ಎಲ್ಲೆಡೆ ಅಸ್ತವ್ಯಸ್ತವಾಗಿರುವುದು ಕಂಡು ಬಂದಿದೆ. ಮರಗಳು, ಬೀದಿ ದೀಪದ ಕಂಬಗಳು ಉರುಳಿರುವುದು ಎಲ್ಲೆಡೆ ಸಾಮಾನ್ಯವಾಗಿದೆ.
ಮಾಗಡಿ ರಸ್ತೆ , ಗಾಂಧಿ ನಗರ, ಹೆಬ್ಬಾಳ, ಪದ್ಮನಾಭನಗರ, ಹನುಮಂತನಗರ, ಶ್ರೀನಗರ, ಇಂದಿರಾನಗರ, ಮಡಿವಾಳ, ಕೋರಮಂಗಲ, ಶಿವಾಜಿನಗರ, ಮತ್ತಿಕೆರೆ, ಚಾಮರಾಜಪೇಟೆ ಮುಂತಾದ ಅನೇಕ ತಗ್ಗು ಪ್ರದೇಶಗಳ ಮನೆಗಳಲ್ಲೆಲ್ಲ ನೀರು ನುಗ್ಗಿದೆ. ಕೃಷ್ಣರಾಜ ಮಾರುಕಟ್ಟೆ ಸಂಕೀರ್ಣಕ್ಕೂ ನೀರು ನುಗ್ಗಿದೆ. ನಗರದ ಬಹುತೇಕರು ವರುಣನ ಅವಕೃಪೆಗೆ ಈಡಾಗಿರುವುದು ಕಂಡುಬಂದಿದೆ.
ಮಳೆಯ ಮುಸುಕು ಮಂಗಳವಾರವೂ ಮುಂದುವರಿದಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications