ಹದಗೆಟ್ಟ ಖಾತೆ ಹಂಚಿಕೆ ಬಿಕ್ಕಟ್ಟು: ಕಾಂಗ್ರಸ್ಗೆ ಗಡುವು ನೀಡಿದ ಜೆಡಿಎಸ್
ಹದಗೆಟ್ಟ ಖಾತೆ ಹಂಚಿಕೆ ಬಿಕ್ಕಟ್ಟು: ಕಾಂಗ್ರಸ್ಗೆ ಗಡುವು ನೀಡಿದ ಜೆಡಿಎಸ್
ಪ್ರಮುಖ ಖಾತೆ ಪಡೆಯಲು ಕಾಂಗ್ರೆಸ್ ಜಿದ್ದು
ಗೃಹ, ಹಣಕಾಸು, ಗ್ರಾಮೀಣಾಭಿವೃದ್ಧಿ ಮತ್ತು ವಿದ್ಯುತ್ ಖಾತೆಗಳಿಗಾಗಿ ಕಾಂಗ್ರೆಸ್ ಹಠ ಹಿಡಿದಿರುವುದು ಆಂತರಿಕ ಬಿಕ್ಕಟ್ಟಿಗೆ ಮೂಲ ಕಾರಣ. ಈ ಖಾತೆಗಳಲ್ಲಿ ಒಂದೆರಡು ಖಾತೆಗಳನ್ನು ಬಿಟ್ಟುಕೊಡಲು ತಯಾರಾಗಿದ್ದ ಜೆಡಿಎಸ್ ಕಾಂಗ್ರೆಸ್ನ ಜಿದ್ದಿನಿಂದ ಇನ್ನಷ್ಟು ಕೆಂಡಮಂಡಲವಾಗಿದೆ.
ಈ ಹಿಂದೆ ‘ಮಹರಾಷ್ಟ್ರ ಮಾದರಿ ಸೂತ್ರ’ ಕ್ಕೆ ಕಾಂಗ್ರೆಸ್ ಪಟ್ಟು ಹಿಡಿದು ಮುಖ್ಯಮಂತ್ರಿ ಸ್ಥಾನವನ್ನು ಪಡೆದುಕೊಂಡಿತ್ತು. ಆ ಮಾದರಿಯಂತೆ ಪ್ರಮುಖ ಖಾತೆಗಳು ಜೆಡಿಎಸ್ ಪಾಲಾಗುತ್ತವೆ. ಆದರೆ ಈಗ ಪ್ರಮುಖ ಖಾತೆಗಳು ಸಹ ಸಮಪಾಲಗಬೇಕು ಎಂಬುದು ಕಾಂಗ್ರೆಸ್ ಹಠ. ಇದರಿಂದ ಉದ್ರೇಕಗೊಂಡ ದೇವೇಗೌಡ ಮತ್ತು ಇತರ ಜೆಡಿಎಸ್ ನಾಯಕರು ಸರಕಾರದಿಂದ ಹೊರಬರಲು ನಿರ್ಧರಿಸಿದ್ದಾರೆ.
ಆದರೆ ಮುಖ್ಯಮಂತ್ರಿ ಧರ್ಮಸಿಂಗ್ ಮತ್ತು ಸೋನಿಯಾಗಾಂಧಿ ರಾಜಕೀಯ ಕಾರ್ಯದರ್ಶಿ ಅಹ್ಮಮದ್ ಪಟೇಲ್ ಅವರ ನವದೆಹಲಿಯ ಮನೆಗೆ ಧಾವಿಸಿ ಒಂದು ದಿನ ಕಾಯುವಂತೆ ವಿನಂತಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ‘ವಚನಭ್ರಷ್ಟತೆ’ಯಿಂದ ಜೆಡಿಎಸ್ ಮುಖಂಡರು ಕಿಡಿಕಿಡಿಯಾಗಿರುವುದು ಸ್ಪಷ್ಟವಾಗಿ ತಿಳಿದು ಬಂದಿದೆ.
ಈ ನಡುವೆ ಮಾಜಿ ಸಚಿವ ಡಿಕೆಶಿ ತಮ್ಮ ಬೆಂಬಲಿಗರೊಂದಿಗೆ ಸೋನಿಯಾಗಾಂಧಿ ಭೇಟಿಗಾಗಿ ಕಾದುಕುಳಿತಿದ್ದಾರೆ. ತಮಗೆ ಸಚಿವ ಖಾತೆ ನೀಡಬೇಕೆಂಬುದು ಅವರ ಹಠವಾಗಿದೆ. ಆದರೆ ಮೈತ್ರಿಕೂಟ ಒಪ್ಪಂದದ ಸಂದರ್ಭದಲ್ಲಿ ಕಾಂಗ್ರೆಸ್ನ ಕೆಲವು ಮಾಜಿ ಸಚಿವರಿಗೆ ಪ್ರಸ್ತುತ ಸಚಿವ ಸ್ಥಾನ ನೀಡಬಾರದು ಎಂದು ಜೆಡಿಎಸ್ ಬೇಡಿಕೆ ಮಂಡಿಸಿತ್ತು.
ಇನ್ನೊಂದೆಡೆ ಮೈತ್ರಿಕೂಟದಲ್ಲಿ ತನ್ನ ಸ್ಥಾನ ತೀವ್ರ ಕುಸಿಯುವ ಸಾಧ್ಯತೆ ಮನಗಂಡ ಮಲ್ಲಿಕಾರ್ಜುನ ಖರ್ಗೆ ತೀರ್ವ ಅಸಮಾಧಾನಗೊಂಡಿದ್ದರು. ಅವರನ್ನು ಸಮಾಧಾನ ಪಡಿಸುವುದು ಧರ್ಮಸಿಂಗ್ ಅವರಿಗೆ ದೊಡ್ಡ ಸಂಗತಿಯಾಗಿ ಪರಿಣಮಿಸಿದೆ.
ಮುಖಪುಟ / ಧರ್ಮ-ಕಾರಣ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications