ಮಾನವ ರಹಿತ ಯದ್ಧ ಟ್ಯಾಂಕರ್ನ್ನು ಅಭಿವೃದ್ಧಿಪಡಿಸಿದ ವಿದ್ಯಾರ್ಥಿಗಳು
ಮಾನವ ರಹಿತ ಯದ್ಧ ಟ್ಯಾಂಕರ್ನ್ನು ಅಭಿವೃದ್ಧಿಪಡಿಸಿದ ವಿದ್ಯಾರ್ಥಿಗಳು
ಡಾ. ಅಂಬೇಡ್ಕರ್ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳಂದ ಮಾನವ ರಹಿತವಾದ ಮೊಟ್ಟ ಮೊದಲ ಯುದ್ಧ ಟ್ಯಾಂಕರ್.
ಈ ಯುದ್ಧ ಟ್ಯಾಂಕರ್ನ್ನು ಕಂಟ್ರೋಲ್ ರೂಂ(ನಿಯಂತ್ರಣ ಕೋಣೆ)ನಿಂದ ರೇಡಿಯೋ ತರಂಗದ ಸಂಕೇತಗಳನ್ನು ಬಳಸಿ ನಿಯಂತ್ರಿಸಬಹುದಾಗಿದೆ. ಇದು ಮಾನವ ರಹಿತವಾದ ಮೊಟ್ಟ ಮೊದಲ ಯುದ್ಧ ಟ್ಯಾಂಕರ್ ಆಗಿದೆ. ಇದರಲ್ಲಿ ಚಾಲಕನ ಕೆಲಸವನ್ನು ರಿಮೋಟ್ ಕಂಟ್ರೋಲ್ ಮಾಡುತ್ತದೆ. ಕಮಾಂಡರ್ ಕೊಡಬೇಕಾದ ನಿರ್ದೇಶನವನ್ನು ನಿಯಂತ್ರಣ ಕೋಣೆಯಿಂದಲೇ ನೀಡಬಹುದಾಗಿದೆ. ಇದರಿಂದ ಯುದ್ಧ ಭೂಮಿಯಲ್ಲಿ ಸಂಭವಿಸಬಹುದಾದ ಸಾವು-ನೋವುಗಳನ್ನು ತಪ್ಪಿಸಬಹುದಾಗಿದೆ ಎಂದು ಮಾರ್ಗದರ್ಶಕರಾದ ಜಯರಾಂ ಸುದ್ದಿಗಾರರಿಗೆ ತಿಳಿಸಿದರು.
ರವಿ ನಾರಾಯಣ್, ಜಯರಾಂ ಮತ್ತು ಇತರ ಅಧ್ಯಾಪಕರ ಮಾರ್ಗದರ್ಶನದಲ್ಲಿ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಾದ ವಿ.ಎಸ್. ಸುಧಾಕರ್, ಟಿ. ಜಾರ್ಜ್ ಜಾನ್, ಎಸ್. ದೀಪಕ್ ಕುಮಾರ್ ಹಾಗೂ ಶ್ರೀನಿವಾಸ್ ಶೆಟ್ಟಿ ಅವರು ಈ ಟ್ಯಾಂಕರ್ನ್ನು ಅಭಿವೃದ್ಧಿಪಡಿಸಿದ್ದಾರೆ.
ಈ ಯುದ್ಧ ಟ್ಯಾಂಕರ್ ಎಲ್ಲರಿಗೂ ಒಂದು ಮಾದರಿಯಾಗಲಿದೆ. ಅಮೆರಿಕದ ಎಂ-1 ಯುದ್ಧ ಟ್ಯಾಂಕರ್ಗಿಂತ ಉನ್ನತ ತಂತ್ರಜ್ಞಾನವನ್ನು ಇದು ಹೊಂದಿದೆ. ಟ್ಯಾಂಕರ್ನ ಕ್ಯಾಮರಾ, ಗನ್ಗಳನ್ನು ಎಲ್ಲ ದಿಕ್ಕಿಗೂ ತಿರುಗಿಸಬಲ್ಲ ವ್ಯವಸ್ಥೆಯಿದೆ. ನಿಯಂತ್ರಣ ಕೋಣೆಯಿಂದಲೇ ಟಿವಿ ಪರದೆಯ ಮೂಲಕ ಟ್ಯಾಂಕರ್ನ ಚಲನವಲನಗಳನ್ನು ನೋಡಿ ನಿಯಂತ್ರಿಸಬಹುದಾಗಿದೆ.
(ಏಜನ್ಸೀಸ್)
ಮುಖಪುಟ / ವಾಟ್ಸ್ ಹಾಟ್
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications