ಸದ್ಯ ಕಾವೇರಿ ಪ್ರಾಧಿಕಾರ ಸಭೆ ಕರೆಯುವು ಅಗತ್ಯವಿಲ್ಲ: ಧರ್ಮಸಿಂಗ್
ಸದ್ಯ ಕಾವೇರಿ ಪ್ರಾಧಿಕಾರ ಸಭೆ ಕರೆಯುವು ಅಗತ್ಯವಿಲ್ಲ: ಧರ್ಮಸಿಂಗ್
ಪರಿಸ್ಥಿತಿ ಪರಿಶೀಲಿಸಲು ಕೇಂದ್ರದಿಂದ ತ್ರಿಸದಸ್ಯ ತಂಡದ ಭೇಟಿ
ಫೋನ್ ಮೂಲಕ ಮಾತನಾಡಿರುವುದಲ್ಲದೆ, ಪತ್ರದ ಮೂಲಕವೂ ಪ್ರಧಾನಿಯವರಿಗೆ ತಿಳಿಸಲಾಗಿದೆ. ಪತ್ರದಲ್ಲಿ ಕಾವೇರಿ ಜಲಾಶಯದಲ್ಲಿರುವ ನೀರಿನ ಮಟ್ಟ ಮತ್ತು ರಾಜ್ಯ ಎದುರಿಸುತ್ತಿರುವ ಪರಿಸ್ಥಿತಿಯನ್ನು ವಿವರಿಸಲಾಗಿದೆ ಎಂದು ಮುಖ್ಯಮಂತ್ರಿ ಪತ್ರಕರ್ತರಿಗೆ ತಿಳಿಸಿದರು..
ರಾಜ್ಯದ ಕೆಲವೆಡೆ ಮಳೆಯಾದರೂ ಕಾವೇರಿಯ ನಾಲ್ಕು ಜಲಾಶಯದಲ್ಲಿ ನೀರಿನ ಮಟ್ಟ ಕನಿಷ್ಠವಾಗಿಯೇ ಇದೆ. ಇದಕ್ಕೆ ಎರಡು ವರ್ಷ ಮಳೆ ಬಾರದಿರುವುದು ಕಾರಣ ಎಂದು ಹೇಳಿದರು.
ಮುಖ್ಯಅಭ್ಯಂತರ ವಸಿಷ್ಠ ನೇತೃತ್ವದಲ್ಲಿ ಕೇಂದ್ರ ಜಲ ಮಂಡಳಿ ಆಯೋಗದ ತ್ರಿಸದಸ್ಯ ತಂಡವು ಈ ನಾಲ್ಕು ಜಲಾಶಯಗಳಿಗೆ ಭೇಟಿ ನೀಡಲಿದೆ. ಬಳಿಕ ರಾಜ್ಯ ನೀರಾವರಿ ಇಲಾಖೆ ಜೊತೆ ಚರ್ಚಿಸಿ ಪ್ರಧಾನ ಮಂತ್ರಿಯವರಿಗೆ ವರದಿ ಒಪ್ಪಿಸಲಿದೆ. ಸದ್ಯದಲ್ಲಿಯೇ ನಾವು ರಾಜ್ಯದ ಸರ್ವ ಪಕ್ಷ ಸಭೆ ಕರೆದು ಚರ್ಚಿಸುತ್ತೇವೆ ಎಂದು ಹೇಳಿದರು.
ಕಾವೇರಿ ತೀರದ ಕ್ಷೇತ್ರದಿಂದ ಗೆದ್ದು ಬಂದಿರುವ ಉಪಮುಖ್ಯಮಂತ್ರಿ ಸಿದ್ದರಾಮಯ್ಯಅವರ ನಿಯೋಗದ ಬೇಡಿಕೆಗಳನ್ನು ಆಲಿಸಿ ಪರಿಶೀಲಿಸುತ್ತೇವೆ. ಆದರೆ ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುವ ಪ್ರಮೇಯವೇ ಇಲ್ಲ ಎಂದು ಸ್ಪಷ್ಟಪಡಿಸಿದರು.
(ಪಿಟಿಐ)
ಮುಖಪುಟ / ಕಾವೇರಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications