ಸಚಿವ ಸಂಪುಟದಲ್ಲಿ ಎಚ್ಕೆಯವರಿರದಿದ್ದರೆ ಪ್ರತ್ಯೇಕ ರಾಜ್ಯ ಹೋರಾಟ..!
ಸಚಿವ ಸಂಪುಟದಲ್ಲಿ ಎಚ್ಕೆಯವರಿರದಿದ್ದರೆ ಪ್ರತ್ಯೇಕ ರಾಜ್ಯ ಹೋರಾಟ..!
ಇದು ದಕ್ಷಿಣ ಕರ್ನಾಟಕದವರ ಪೂರ್ವಯೋಜಿತ ಸಂಚು...
ಮಾಜಿ ಅಧ್ಯಕ್ಷ ರಾಮಣ್ಣ ಭಜಂತ್ರಿ, ವಿಧಾನ ಪರಿಷತ್ ಸದಸ್ಯ ಕರಿಯಣ್ಣ ಸಂಗಟಿ ಮುಂತಾದವರೂ ಕೂಡ ಎಚ್. ಎಲ್. ಹಿರೇಗೌಡರ ಅಭಿಪ್ರಾಯವನ್ನೇ ಅನುಮೋದಿಸಿದರು. ಎಲ್ಲರ ಮಾತಿನಲ್ಲೂ ಆಕ್ರೋಷ ಎದ್ದು ಕಾಣುತ್ತಿತ್ತು. ಎಲ್ಲರ ಮುಖಗಳೂ ಕಳೆಗುಂದಿತ್ತು. ಇದರಲ್ಲಿ ಏನೋ ಕುತಂತ್ರವಿದೆಯೆಂಬುದು ಸ್ಪಷ್ಟವಾಗಿ ಕಂಡುಬರುತ್ತಿತ್ತು.
ಸಹನೆಗೂ ಒಂದು ಮಿತಿಯಿದೆ : ರಾಮಣ್ಣ ಭಜಂತ್ರಿ
ಈಗ ಕಾಲ ಕೂಡಿ ಬಂದಿದೆ. ಉತ್ತರ ಕರ್ನಾಟಕವನ್ನು ಬಹಳ ಸಮಯದಿಂದಲೂ ನಿರ್ಲಕ್ಷಿಸುತ್ತಾ ಬರಲಾಗಿದೆ. ಎಚ್. ಕೆ. ಪಾಟೀಲರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳದಿರುವುದು ಇದು ಇನ್ನೂ ಸ್ಪಷ್ಟವಾಗಿದೆ. ಸಹನೆಗೂ ಒಂದು ಒಂದು ಮಿತಿಯೆಂಬುದಿರುತ್ತದೆ. ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ಮಾಡುವುದು ಅನಿವಾರ್ಯವಾಗಿದೆ ಎಂದು ಜಿ. ಪಂ. ಮಾಜಿ ಅಧ್ಯಕ್ಷ ರಾಮಣ್ನ ಭಜಂತ್ರಿ ಕುಪಿತರಾದರು.
ರಕ್ತದ ರುಜು
ನೂತನ ಸಚಿವ ಸಂಪುಟದಲ್ಲಿ ಪಾಟೀಲರಿಗೆ ಸೂಕ್ತ ಸ್ಥಾನ ನೀಡದಿರುವುದನ್ನು ವಿರೋಧಿಸಿ ರಕ್ತದಿಂದ ಸಹಿ ಮಾಡಿದ ಮನವಿ ಪತ್ರವನ್ನು ಕೆಪಿಸಿಸಿ, ಎಐಸಿಸಿಗೆ ನೀಡುತ್ತೇವೆ ಎಂದು ಜಿ. ಪಂ. ಅಧ್ಯಕ್ಷ ಎಚ್. ಎಲ್. ಹಿರೇಗೌಡ ಅವರು ತಿಳಿಸಿದರು. ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಸದಸ್ಯರು, ಕಾಂಗ್ರೆಸ್ ನಾಯಕರೂ ಸಹ ರಕ್ತದಿಂದ ಸಹಿ ಮಾಡಿದ ಮನವಿ ಸಲ್ಲಿಸಲು ತಯಾರಿರುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.
ಸಾಮೂಹಿಕ ರಾಜೀನಾಮೆ
ಹಾವೇರಿ ಜಿ. ಪಂ. ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಸೇರಿದಂತೆ 23 ಜನ ಕಾಂಗ್ರೆಸ್ ಸದಸ್ಯರು ತಮ್ಮ ಸ್ತಾನಗಳಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದಾರೆ. ಹಾವೇರಿಯಲ್ಲಿ ಜೂನ್ 8ರಂದು ನಡೆದ ತುರ್ತು ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಯ್ತು ಎಂದು ಜಿ.ಪಂ. ಅಧ್ಯಕ್ಷ ಎಸ್. ಸಿ. ಶಿಡೇನೂರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications