ಸಿಇಟಿ ರ್ಯಾಂಕ್ ಗಳಿಸುವುದಕ್ಕೆ ಇಂಗ್ಲಿಷ್ ಮಾಧ್ಯಮ ಅನಿವಾರ್ಯವಲ್ಲ
ಸಿಇಟಿ ರ್ಯಾಂಕ್ ಗಳಿಸುವುದಕ್ಕೆ ಇಂಗ್ಲಿಷ್ ಮಾಧ್ಯಮ ಅನಿವಾರ್ಯವಲ್ಲ
ಬಿಜಾಪುರದ ಕನ್ನಡಪೋರ ಶರಣಪ್ಪನಿಗೆ ಶುಭಾಶಯಗಳು
ವಿದ್ಯಾ ವಿನಯೇನ ಶೋಭತೆ ಎಂಬ ಮಾತೊಂದಿದೆ. ಆ ಮಾತಿಗೆ ಪೂರಕವಾದುದು ಶರಣಪ್ಪನ ವ್ಯಕ್ತಿತ್ವ. ನಿಗರ್ವಿ, ಸರಳ ಸ್ವಭಾವದ ಶರಣಪ್ಪನಿಗೆ ಹತ್ತು ರ್ಯಾಂಕ್ಗಳಲ್ಲಿ ಒಂದು ಬರಬಹುದೆಂಬ ನಿರೀಕ್ಷೆ ಮೊದಲೇ ಇತ್ತಂತೆ. ಆದರೆ ಮೊದಲನೇ ರ್ಯಾಂಕ್ ಬಂದಿರುವುದು ಮನೆಯವರಿಗೂ ನನಗೂ ತುಂಬ ಸಂತೋಷ ತಂದಿದೆ ಎಂದು ಶರಣಪ್ಪ ತನ್ನ ಸಂತೋಷನ್ನು ಗುರುವಾರ ಸುದ್ದಿಗಾರರೊಂದಿಗೆ ಹಂಚಿಕೊಂಡನು.
ಐಎಸ್ (Indian Administrative Service) ಪರೀಕ್ಷೆ ಬರೆಯುವ ಆಕಾಂಕ್ಷೆಯನ್ನು ಹೊಂದಿರುವ ಶರಣಪ್ಪನಿಗೆ ಸಧ್ಯದಲ್ಲಿ ಇಂಜಿನಿಯರಿಂಗ್ ಮಾಡುವಾಸೆ. ಸಿಇಟಿ ಪರೀಕ್ಷೆಯ ಮುನ್ನ ಈತ ಯಾವುದೇ ಟ್ಯೂಷನ್ಗಳಿಗೆ ಹೋದವನಲ್ಲ. ಪ್ರತಿದಿನ 8 ಗಂಟೆಗಳ ಅಧ್ಯಯನ. ಸ್ನೇಹಿತರು ಒತ್ತಾಯಿಸಿದ್ದರಿಂದ ಬೆಂಗಳೂರಿನ ಟ್ಯುಟೋರಿಯಲ್ ಒಂದರಲ್ಲಿ 15 ದಿನದ ಸಿಇಟಿ ಸಂಬಂಧಿಸಿದ ಕೋರ್ಸ್ ತೆಗೆದುಕೊಂಡಿದ್ದನಂತೆ.
ಶರಣಪ್ಪ ಪ್ರಾಥಮಿಕ ಶಿಕ್ಷಣವನ್ನಾಗಲೀ, ಮಾಧ್ಯಮಿಕ ಶಿಕ್ಷಣವನ್ನಾಗಲೀ ಯಾವುದೇ ಹೈ ಗ್ರೇಡ್ ಆಂಗ್ಲ ಮಾಧ್ಯಮ ಸಂಸ್ಥೆಗಳಲ್ಲಿ ಮಾಡಿಲ್ಲ. ಬಿಜಾಪುರ ಜಿಲ್ಲೆ ತಾಸಬಾವಾಡಿಯ ಸಾಯಿಬಾಬಾ ಪ್ರಾಥಮಿಕ ಶಾಲೆಯಲ್ಲಿ ಓದಿ, ತದನಂತರ ರುಕ್ಮಾಂಗ ಮಾಧ್ಯಮಿಕ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲೇ ವ್ಯಾಸಂಗ ಮಾಡಿದ. ಆಧುನಿಕ ಪರಿಸರದಲ್ಲಿ ವಿದ್ಯಾರ್ಜನೆ ಮಾಡುವ ಬೆಂಗಳೂರು, ಮಂಗಳೂರು, ಮೈಸೂರು, ಬೆಳಗಾವಿಯ ವಿದ್ಯಾರ್ಥಿಗಳನ್ನು ಹಿಂದೆಹಾಕಿ ಪ್ರಥಮ ರ್ಯಾಂಕ್ ಗಳಿಸಿರುವ ಶರಣಪ್ಪನಿಗೆ ದಟ್ಸ್ ಕನ್ನಡ ಬಳಗದ ಶುಭಾಶಯಗಳು.
(ಇನ್ಫೋ ವಾರ್ತೆ)
ಮುಖಪುಟ / ವಾಟ್ಸ್ ಹಾಟ್
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications