ಪಡಿತರ ಗೋಧಿ ಪಾಪಿ ಪಾಲು ! ಹಗರಣದಿ ಪ್ರಭಾವಿಗಳ ಷಾಮೀಲು?
ಪಡಿತರ ಗೋಧಿ ಪಾಪಿ ಪಾಲು ! ಹಗರಣದಿ ಪ್ರಭಾವಿಗಳ ಷಾಮೀಲು?
ಮೂವರ ಬಂಧನ, 903 ಕ್ವಿಂಟಾಲ್ ಗೋಧಿ ವಶ
903 ಕ್ವಿಂಟಾಲ್ ಪಡಿತರ ಗೋಧಿಯನ್ನು ಬೆಂಗಳೂರಿನ ಗಿರಣಿಯಾಂದರಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಅಧಿಕಾರಿಗಳು ವಶಪಡಿಸಿಕೊಂಡಿದ್ದು , ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎನ್.ಧರ್ಮಸಿಂಗ್ ಭಾನುವಾರ ಎಚ್ಚರಿಸಿದ್ದಾರೆ. ಪ್ರಕರಣದ ಕುರಿತು ಸಿಸಿಬಿ ವರದಿಯನ್ನು ನಿರೀಕ್ಷಿಸುತ್ತಿದ್ದು , ವರದಿ ಬಂದ ನಂತರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಹೊಸೂರು ರಸ್ತೆಯ ಕೂಡ್ಲು ಗೇಟ್ ಸಮೀಪದ ಚಾಮುಂಡೇಶ್ವರಿ ರೋಲರ್ ಫ್ಲೋರ್ಮಿಲ್ನಲ್ಲಿ ಅಕ್ರಮ ಗೋಧಿ ದಾಸ್ತಾನು ಪತ್ತೆಯಾಗಿದ್ದು , ಈ ಗೋಧಿಯನ್ನು ರವೆ ಮಾಡಲಿಕ್ಕಾಗಿ ಗಿರಣಿಗೆ ತರಲಾಗಿತ್ತು ಎನ್ನಲಾಗಿದೆ. ಈ ಸಂಬಂಧ ಏಳು ಲಾರಿಗಳನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಲಾರಿಗಳ ಮಾಲಿಕರು ಯಾರೆಂಬುದು ಪತ್ತೆಯಾಗಿಲ್ಲ . ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರಣಿ ಒಡೆಯ ಮಹೇಂದ್ರ ಗುಪ್ತಾ , ಪ್ರಭಾಕರ್ ಹಾಗೂ ಸಲೀಂ ಪಾಷ ಎನ್ನುವವರನ್ನು ಬಂಧಿಸಲಾಗಿದೆ.
ಅಂದಹಾಗೆ, ಅಕ್ರಮ ಗೋಧಿ ದಾಸ್ತಾನಿನ ಮೇಲಿನ ದಾಳಿ ಮೇ ತಿಂಗಳ 21ರಂದೇ ನಡೆದಿದೆ. ಆದರೆ ದಾಳಿಯ ಬಗೆಗಿನ ವಿವರಗಳು ಬೆಳಕಿಗೆ ಬಂದಿರುವುದು ಜೂನ್ 13ರ ಭಾನುವಾರ. ಈ ಪ್ರಕರಣದಲ್ಲಿ ಪ್ರಭಾವಿ ಸಚಿವರು ಭಾಗಿಯಾಗಿದ್ದಾರೆ ಎಂದು ಬಿಜೆಪಿ ನಾಯಕ ಯಡಿಯೂರಪ್ಪ ಆಪಾದಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications