ರಾಜ್ಯಸಭೆ ‘ರೇಸ್’ನಲ್ಲಿ ಜಾಗತಿಕ ಖ್ಯಾತಿಯ ಕುದುರೆಧಣಿ ರಾಮಸ್ವಾಮಿ
ರಾಜ್ಯಸಭೆ ‘ರೇಸ್’ನಲ್ಲಿ ಜಾಗತಿಕ ಖ್ಯಾತಿಯ ಕುದುರೆಧಣಿ ರಾಮಸ್ವಾಮಿ
ಬಿಜೆಪಿಯಿಂದ ವೆಂಕಯ್ಯ ನಾಯ್ಡು, ಶಕುಂತಲಾ ಹೆಗಡೆ ಸ್ಪರ್ಧೆ
ರಾಜ್ಯದಿಂದ ನಾಲ್ಕು ಮಂದಿ ರಾಜ್ಯಸಭೆಯನ್ನು ಪ್ರವೇಶಿಸಲು ಅವಕಾಶವಿದ್ದು, ಈ ನಾಲ್ಕು ಸ್ಥಾನಗಳಿಗಾಗಿ ಕಾಂಗ್ರೆಸ್, ಬಿಜೆಪಿ ಹಾಗೂ ಜಾತ್ಯತೀತ ಜನತಾದಳ ಜಿದ್ದಾಜಿದ್ದಿನ ಸ್ಪರ್ಧೆ ನಡೆಸಿವೆ. ಬುಧವಾರ (ಜೂ.16) ನಡೆದ ಅನಿರೀಕ್ಷಿತ ರಾಜಕೀಯ ಬೆಳವಣಿಗೆಯಲ್ಲಿ ಕುದುರೆ ರೇಸ್ ಧಣಿ ರಾಮಸ್ವಾಮಿ ಅವರು ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವುದರೊಂದಿಗೆ ಚುನಾವಣಾ ಕಣ ರಂಗೇರಿತು.
ಬಿಜೆಪಿ ರಾಷ್ಟ್ರಾಧ್ಯಕ್ಷ ಎಂ.ವೆಂಕಯ್ಯ ನಾಯ್ಡು , ದಿವಂಗತ ರಾಮಕೃಷ್ಣ ಹೆಗಡೆ ಅವರ ಪತ್ನಿ ಶಕುಂತಲಾ ಹೆಗ್ಗಡೆ ನಾಮಪತ್ರ ಸಲ್ಲಿಸಿದ ಇತರ ಪ್ರಮುಖರು. ಬಿಜೆಪಿ ಮತ್ತು ಸಂಯುಕ್ತ ಜನತಾದಳದ ಅಭ್ಯರ್ಥಿಗಳಾಗಿ ವೆಂಕಯ್ಯ ಹಾಗೂ ಶಕುಂತಲಾ ಕಣಕ್ಕಿಳಿದಿದ್ದಾರೆ.
ಜಾತ್ಯತೀತ ಜನತಾದಳದ ಬೆಂಬಲದಿಂದ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಕುದುರೆ ಧಣಿ ರಾಮಸ್ವಾಮಿ, ಬುಧವಾರ ಚುನಾವಣಾಧಿಕಾರಿ ಟಿ.ರಾಜಣ್ಣ ಅವರ ಬಳಿ ನಾಮಪತ್ರ ಸಲ್ಲಿಸಿದರು. ರಾಮಸ್ವಾಮಿ ಅವರೊಂದಿಗೆ ಸಚಿವರಾದ ಎಂ.ಪಿ.ಪ್ರಕಾಶ್, ಪಿಜಿಆರ್ ಸಿಂಧ್ಯಾ, ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಪುತ್ರ ಎಚ್.ಡಿ.ರೇವಣ್ಣ ಜೊತೆಗಿದ್ದರು.
ಹಾದಿ ಸುಗಮ : ಬಿಜೆಪಿ ಅಧ್ಯಕ್ಷ ವೆಂಕಯ್ಯನಾಯ್ಡು ಅವರು ಸತತ 2ನೇ ಬಾರಿಗೆ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆ ಬಯಸುತ್ತಿದ್ದು , ಅವರ ಹಾದಿ ಸುಗಮವಾಗಿದೆ. ಆದರೆ ಬಿಜೆಪಿ ಬೆಂಬಲಿತ ಮತ್ತೊಬ್ಬ ಅಭ್ಯರ್ಥಿ ಶಕುಂತಲಾ ಹೆಗ್ಗಡೆ ಅವರ ಗೆಲುವಿಗೆ ಇನ್ನೂ 6 ಮಂದಿ ಶಾಸಕರ ಬೆಂಬಲ ಅಗತ್ಯವಿದ್ದು , ಮುಂದಿನ ರಾಜಕೀಯ ವಿದ್ಯಮಾನಗಳು ಕುತೂಹಲ ಹುಟ್ಟಿಸಿವೆ.
ರೇಸ್ ಖ್ಯಾತಿಯ ರಾಮಸ್ವಾಮಿ ಗೆಲುವು ಕೂಡ ನಿಶ್ಚಿತವಾಗಿದೆ. ಜಾತ್ಯತೀತ ಜನತಾದಳದ 58 ಶಾಸಕರಲ್ಲಿ ರಾಮಸ್ವಾಮಿ ಅವರ ಗೆಲುವಿಗೆ ಸಾಕಾಗಿ, ಇನ್ನೂ 13 ಮತಗಳು ಉಳಿಯುತ್ತವೆ. ಈ ಮತಗಳು ಕಾಂಗ್ರೆಸ್ ಅಭ್ಯರ್ಥಿಯ ಪಾಲಾಗುವ ನಿರೀಕ್ಷೆಯಿದೆ.
ಕಾಂಗ್ರೆಸ್ನಿಂದ ಬಿ.ಕೆ.ಹರಿಪ್ರಸಾದ್ ಹಾಗೂ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಸ್ಪರ್ಧೆಯಲ್ಲಿದ್ದಾರೆ.
ಕಳೆದ ಚುನಾವಣೆಯಲ್ಲಿ ಮದ್ಯೋದ್ಯಮಿ ವಿಜಯ್ ಮಲ್ಯ ಅವರ ಸ್ಪರ್ಧೆಯಿಂದ ರಾಜ್ಯಸಭೆ ಚುನಾವಣೆ ಕಳೆಗಟ್ಟಿತ್ತು . ಈಗ ರಾಮಸ್ವಾಮಿ ಸರದಿ. ಅಂದಹಾಗೆ, ಮಲ್ಯ ಕೂಡ ರೇಸ್ ಪ್ರಿಯರು. ಕುದುರೆ ಮಾಲೀಕರು ಕೂಡ.
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications