ಬೆಳೆ ರಕ್ಷಿಸಲು ಕಾವೇರಿ ಹರಿಸಿರಿ;ಧರ್ಮಸಿಂಗ್ಗೆ ತಮಿಳ್ನಾಡು ನಿಯೋಗ ಮೊರೆ
ಬೆಳೆ ರಕ್ಷಿಸಲು ಕಾವೇರಿ ಹರಿಸಿರಿ;ಧರ್ಮಸಿಂಗ್ಗೆ ತಮಿಳ್ನಾಡು ನಿಯೋಗ ಮೊರೆ
ರಾಜ್ಯ ಸರ್ಕಾರದ ನಿಲುವು ಅಚಲ - ವಿಧಾನಮಂಡಲದಲ್ಲಿ ಖರ್ಗೆ
ಲೋಕೋಪಯೋಗಿ ಸಚಿವ ಒ.ಪನ್ನೀರ್ಸೆಲ್ವಂ ನೇತೃತ್ವದ ತಮಿಳುನಾಡಿನ ನಿಯೋಗ ಜೂ.16ರ ಬುಧವಾರ ಬೆಳಗ್ಗೆ ಮುಖ್ಯಮಂತ್ರಿ ಧರ್ಮಸಿಂಗ್ ಅವರನ್ನು ಭೇಟಿ ಮಾಡಿ ನೀರುಬಿಡುವಂತೆ ಮನವಿ ಮಾಡಿತು. ಈ ಕುರಿತು ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಅವರು ಬರೆದಿರುವ ಅಧಿಕೃತ ಮನವಿ ಪತ್ರವನ್ನು ನಿಯೋಗ ಧರ್ಮಸಿಂಗ್ರಿಗೆ ಹಸ್ತಾಂತರಿಸಿತು.
ಧರ್ಮಸಿಂಗ್ರ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪನ್ನೀರ್ಸೆಲ್ವಂ, ಮುಖ್ಯಮಂತ್ರಿಗಳೊಂದಿಗಿನ ಭೇಟಿ ಹಾಗೂ ಮಾತುಕತೆ ಸೌಹಾರ್ದಯುತವಾಗಿತ್ತು . ತಮಿಳುನಾಡಿನ ಮನವಿಯನ್ನು ಪರಿಶೀಲಿಸುವುದಾಗಿ ಧರ್ಮಸಿಂಗ್ ಆಶ್ವಾಸನೆ ನೀಡಿದ್ದಾರೆ ಎಂದರು.
ಈ ನಡುವೆ, ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ವಿಷಯದಲ್ಲಿ ರಾಜ್ಯ ಸರ್ಕಾರದ ನಿಲುವು ಅಚಲವಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಮಲ್ಲಿಕಾರ್ಜುನ ಖರ್ಗೆ ಬುಧವಾರ ವಿಧಾನಮಂಡಲದಲ್ಲಿ ಸ್ಪಷ್ಟಪಡಿಸಿದ್ದಾರೆ. ರಾಜ್ಯದ ರೈತರ ಹಿತಾಸಕ್ತಿಯನ್ನು ರಕ್ಷಿಸುವ ಉದ್ದೇಶದಿಂದ ತಮಿಳುನಾಡಿಗೆ ತೊಟ್ಟು ನೀರೂ ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಧರ್ಮಸಿಂಗ್ ಈ ಮುನ್ನ ಹೇಳಿದ್ದರು.
(ಪಿಟಿಐ)
ಮುಖಪುಟ / ಕಾವೇರಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications