Get Updates
Get notified of breaking news, exclusive insights, and must-see stories!

ಹೈಕೋರ್ಟ್‌ ಪೀಠ : ಸರ್ವಪಕ್ಷ ನಿಯೋಗಕ್ಕೆ ಧರ್ಮ ಸಿಂಗ್‌ ಸಾರಥ್ಯ

ಹೈಕೋರ್ಟ್‌ ಪೀಠ : ಸರ್ವಪಕ್ಷ ನಿಯೋಗಕ್ಕೆ ಧರ್ಮ ಸಿಂಗ್‌ ಸಾರಥ್ಯ
ಪ್ರತಿಭಟನೆ ಕೈಬಿಡಲು ಧಾರವಾಡ ವಕೀಲರಿಗೆ ಮನವಿ

ಬೆಂಗಳೂರು : ಉತ್ತರ ಕರ್ನಾಟಕ ಪ್ರದೇಶದಲ್ಲಿ ಹೈಕೋರ್ಟ್‌ ಪೀಠ ಸ್ಥಾಪಿಸುವಂತೆ ಮತ್ತೊಮ್ಮೆ ಮನವಿಯನ್ನು ಸಲ್ಲಿಸಲು ಮುಖ್ಯಮಂತ್ರಿ ಎನ್‌.ಧರ್ಮಸಿಂಗ್‌ ನೇತೃತ್ವದ ಸರ್ವ ಪಕ್ಷಗಳ ನಿಯೋಗ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ಬಳಿಗೆ ತೆರಳಲಿದೆ.

ಜುಲೈ 6 ಅಥವಾ 7 ರಂದು ಸರ್ವ ಪಕ್ಷಗಳ ನಿಯೋಗದೊಂದಿಗೆ ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್‌.ಕೆ.ಜೈನ್‌ ಅವರನ್ನು ಭೇಟಿ ಮಾಡಲಾಗುವುದು. ಉತ್ತರ ಕರ್ನಾಟಕದಲ್ಲಿ ಹೈಕೋರ್ಟ್‌ ಪೀಠ ರಚನೆ ಸಂಬಂಧ ನ್ಯಾಯಮೂರ್ತಿಗಳಿಗೆ ಮನವಿ ಸಲ್ಲಿಸುವುದು ಈ ಸರ್ವಪಕ್ಷಗಳ ನಿಯೋಗದ ಉದ್ದೇಶ ಎಂದು ಮುಖ್ಯಮಂತ್ರಿ ಎನ್‌.ಧರ್ಮಸಿಂಗ್‌ ಗುರುವಾರ (ಜು.1) ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹೈಕೋರ್ಟ್‌ ಪೀಠ ಸ್ಥಾಪನೆಗೆ ಒತ್ತಾಯಿಸಿ ಧಾರವಾಡ ವಕೀಲರ ಸಂಘ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಕೈ ಬಿಡುವಂತೆ ಬಾರ್‌ ಕೌನ್ಸಿಲ್‌ ಸದಸ್ಯರಿಗೆ ಧರ್ಮಸಿಂಗ್‌ ಮನವಿ ಮಾಡಿಕೊಂಡರು.

(ಪಿಟಿಐ)

ಮುಖಪುಟ / ಧರ್ಮ-ಕಾರಣ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+