ಆಂಧ್ರದ ರೈತ ವಿಧವೆಯರ ಸುಖದುಃಖಕ್ಕೆ ಕಿವಿಯಾದ ಮನಮೋಹನ್
ಆಂಧ್ರದ ರೈತ ವಿಧವೆಯರ ಸುಖದುಃಖಕ್ಕೆ ಕಿವಿಯಾದ ಮನಮೋಹನ್
ಸಂತ್ರಸ್ತ ರೈತರ ಕುಟುಂಬಕ್ಕೆ ನೆರವು, ಪ್ರಧಾನಿ ಭರವಸೆ
ಒಂದು ದಿನದ ಆಂಧ್ರ ಪ್ರವಾಸ ಕೈಗೊಂಡಿರುವ ಪ್ರಧಾನಿ ಮನಮೋಹನ್ಸಿಂಗ್, ಹಳ್ಳಿಗಳಿಗೆ ತೆರಳಿ ಆತ್ಮಹತ್ಯೆಗೆ ಶರಣಾದ ರೈತರ ಕುಟುಂಬ ವರ್ಗಗಳ ಕಷ್ಟಸುಖ ಆಲಿಸಿದರು. ಕಳೆದೆರಡು ವರ್ಷದಲ್ಲಿ ಆಂಧ್ರಪ್ರದೇಶದಲ್ಲಿ ಸಾವಿರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು , ಕಳೆದ ಚುನಾವಣೆಯಲ್ಲಿ ಈ ಸರಣಿ ಆತ್ಮಹತ್ಯೆ ವಿಷಯವನ್ನು ತೆಲುಗುದೇಶಂ ವಿರುದ್ಧ ಕಾಂಗ್ರೆಸ್ ಬ್ರಹ್ಮಾಸ್ತ್ರವನ್ನಾಗಿ ಬಳಸಿ ವಿಜಯಿಯಾಗಿತ್ತು .
ಕರ್ನೂಲಿಗೆ 30 ಕಿಮೀ ದೂರದಲ್ಲಿರುವ ಸೋಮಯಾಜಲುಪಲ್ಲಿ ಗ್ರಾಮಕ್ಕೆ ಪ್ರಧಾನಿ ಭೇಟಿ ನೀಡಿದಾಗ, ಅವರನ್ನು ಸ್ವಾಗತಿಸಿದ್ದು ನತದೃಷ್ಟ ರೈತ ಕುಟುಂಬಗಳ ರೋದನದ ಕಥೆಗಳು. ರೈತ ಮಹಿಳೆಯರನ್ನು ಸಂತೈಸುವುದರಲ್ಲಿಯೇ ಪ್ರಧಾನಿ ಬಹುವೇಳೆ ಕಳೆದರು. ಮಹಿಳೆಯರಿಗೆ ರಾಜ್ಯ ಸರ್ಕಾರ ನೀಡಿದ ಪರಿಹಾರ ಧನದ ಚೆಕ್ಕುಗಳನ್ನು ಅವರು ವಿತರಿಸಿದರು. ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ ಈ ಸಂದರ್ಭದಲ್ಲಿ ಪ್ರಧಾನಿಯಾಂದಿಗೆ ಹಾಜರಿದ್ದರು.
ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳ ಓರ್ವ ವ್ಯಕ್ತಿಗೆ ಸರ್ಕಾರಿ ಕೆಲಸ ನೀಡುವಂತೆ, ಸಂತ್ರಸ್ತ ಕುಟುಂಬಗಳಿಗೆ ಸೂರು ಕಲ್ಪಿಸುವಂತೆ, ಪರಿಹಾರ ನೀಡುವಂತೆ- ಮುಂತಾಗಿ ಅನೇಕ ಅಹವಾಲುಗಳು ಪ್ರಧಾನಿಯವರನ್ನು ತಲುಪಿದವು. ರೈತರಿಗೆ ನೆರವು ನೀಡುವುದಾಗಿ ಮನಮೋಹನ್ಸಿಂಗ್ ಭರವಸೆ ನೀಡಿದರು.
ಆಂಧ್ರಕ್ಕೆ ಬಂದ ಪ್ರಧಾನಿ ಮನಮೋಹನ್ಸಿಂಗ್ ಕರ್ನಾಟಕಕ್ಕೆ ಬರುವುದು ಯಾವಾಗ ? ಇಲ್ಲೂ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ? ರೈತ ವಿಧವೆಯರ, ಕುಟುಂಬದ ಸದಸ್ಯರ ಕಣ್ಣೀರು ಇನ್ನೂ ಒದ್ದೆಯಾಗಿಯೇ ಇದೆ.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications