ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿಗದಿತ ಪ್ರಮಾಣಕ್ಕಿಂತ ಹೆಚ್ಚು ನೀರು : ತಮಿಳ್ನಾಡಿಗೆ ಬಂಪರ್‌ ಲಾಟರಿ

By Staff
|
Google Oneindia Kannada News

ನಿಗದಿತ ಪ್ರಮಾಣಕ್ಕಿಂತ ಹೆಚ್ಚು ನೀರು : ತಮಿಳ್ನಾಡಿಗೆ ಬಂಪರ್‌ ಲಾಟರಿ
ಕಬಿನಿ ಜಲಾಶಯದಿಂದ ಮತ್ತೆ ನೀರು ಬಿಡುಗಡೆ

ಮೈಸೂರು : ಕಬಿನಿ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಮತ್ತೆ ಹೆಚ್ಚಳವಾಗಿದ್ದು , ಜುಲೈ 1ರ ಗುರುವಾರ ತಮಿಳುನಾಡಿಗೆ 8000 ಕ್ಯುಸೆಕ್ಸ್‌ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಪ್ರಸಕ್ತ ಮಳೆಗಾಲದ ಆರಂಭದಲ್ಲೇ ತಮಿಳುನಾಡಿಗೆ ರಾಜ್ಯದಿಂದ ಅಧಿಕ ಪ್ರಮಾಣದ ನೀರು ಹರಿದಂತಾಗಿದೆ.

ಕಬಿನಿ ಜಲಾಶಯದ ಒಳ ಹರಿವಿನ ಪ್ರಮಾಣ ಕಡಿಮೆಯಾದುದರಿಂದ ನೀರು ಹರಿಸುವುದನ್ನು ನಿಲ್ಲಿಸಲಾಗಿತ್ತು . ಆದರೆ, ಪ್ರಸ್ತುತ ಕೇರಳದ ವೈನಾಡು ಪ್ರದೇಶದಲ್ಲಿ ಉತ್ತಮ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಕಬಿನಿಗೆ ಒಳ ಹರಿವು ಹೆಚ್ಚಿದೆ. ಕಬಿನಿಯಲ್ಲಿನ ನೀರಿನ ಸಂಗ್ರಹ 2281.99 ಅಡಿಗೆ ಮುಟ್ಟಿದೆ. ಒಳಹರಿವಿನ ಪ್ರಮಾಣ 12,649 ಕ್ಯುಸೆಕ್ಸ್‌ಗಳಷ್ಟಿದೆ ಎಂದು ಜಲಾಶಯದ ಅಧಿಕಾರಿಗಳು ತಿಳಿಸಿದ್ದಾರೆ.

ಜೂನ್‌ ತಿಂಗಳ ದ್ವಿತೀಯಾರ್ಧದಲ್ಲಿ ಸುಮಾರು 14 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಲಾಗಿದೆ. ಕಾವೇರಿ ನ್ಯಾಯಾಧಿಕರಣ ಮಧ್ಯಂತರ ತೀರ್ಪಿನ ಪ್ರಕಾರ ಕರ್ನಾಟಕ ಈವರೆಗೆ 10.4 ಟಿಎಂಸಿಯಷ್ಟು ನೀರನ್ನು ಮಾತ್ರ ತಮಿಳುನಾಡಿಗೆ ಬಿಡಬೇಕಿತ್ತು .

(ಇನ್ಫೋ ವಾರ್ತೆ)

ಮುಖಪುಟ / ಕಾವೇರಿ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X