Get Updates
Get notified of breaking news, exclusive insights, and must-see stories!

ಕಸಾಪ ಗೌರವ ಕಾರ್ಯದರ್ಶಿ ಹುದ್ದೆಯಿಂದ ಜಿ. ಶಂಕರಯ್ಯ ಬಿಡುಗಡೆ

ಕಸಾಪ ಗೌರವ ಕಾರ್ಯದರ್ಶಿ ಹುದ್ದೆಯಿಂದ ಜಿ. ಶಂಕರಯ್ಯ ಬಿಡುಗಡೆ
ಪರಿಷತ್ತಿನ ಅಧ್ಯಕ್ಷ ಮತ್ತು ಕಾಯದರ್ಶಿಯ ನಡುವೆ ಆಂತರಿಕ ವೈಮನಸ್ಯ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಜಿ. ಶಂಕರಯ್ಯ ಅವರನ್ನು ಆ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ.

ಶಂಕರಯ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಿರ್ಧರಿಸಿರುವುದು ಅವರ ಬೆಂಬಲಿಗರಿಂದ ತಿಳಿದು ಬಂದಿದೆ. ಗೌರವ ಕಾರ್ಯದರ್ಶಿ ಸ್ಥಾನದಲ್ಲಿ ಇದ್ದುಕೊಂಡು ಚುನಾವಣೆ ಪ್ರಚಾರ ನಡೆಸುವುದು ನಿಯಮ ಬಾಹಿರ. ಆ ಕಾರಣದಿಂದ ಅವರನ್ನು ಬಿಡುಗಡೆಗೊಳಿಸಲಾಗಿದೆ ಎಂದು ಪರಿಷತ್ತಿನ ಅಧ್ಯಕ್ಷ ಹರಿಕೃಷ್ಣ ಪುನರೂರು ಆದೇಶ ಹೊರಡಿಸಿದ್ದಾರೆ.

ಅಧ್ಯಕ್ಷರ ಅಧಿಕಾರ ಅವಧಿ ಇನ್ನು ಕೇವಲ ಹತ್ತು ದಿನಗಳು ಮಾತ್ರ ಬಾಕಿ ಇರುವಾಗ ಈ ಆದೇಶ ಹೊರಡಿಸಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಹಿಂದೆ ಅಧ್ಯಕ್ಷ ಪುನರೂರು ಅವರ ಅಧಿಕಾರ ಅವಧಿ ವಿಸ್ತರಿಸುವ ನಿರ್ಣಯಕ್ಕೆ ಶಂಕರಯ್ಯ ತೀರ್ವ ವಿರೋಧ ಒಡ್ಡಿದ್ದರು. ಇದು ಅವರ ನಡುವಿನ ವೈಮನಸ್ಯಕ್ಕೆ ಕಾರಣವಾಗಿತ್ತು.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+