‘ಅಮಾನಿ ಕೆರೆ’ಗುಳುಂ ಯತ್ನ ; ಯಲಹಂಕ ನಾಗರಿಕರಿಂದ ಪ್ರತಿರೋಧ
ಬೆಂಗಳೂರು : ನಗರದ ಯಲಹಂಕದಲ್ಲಿನ ಐತಿಹಾಸಿಕ ಅಮಾನಿ ಕೆರೆ ದಡದಲ್ಲಿ ಉದ್ದೇಶಿತ ಖಾಸಗಿ ಲೇಔಟ್ ನಿರ್ಮಾಣಕ್ಕೆ ಸ್ಥಳೀಯ ನಾಗರಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಅಮಾನಿ ಕೆರೆ ಸುತ್ತಮುತ್ತ ಯಾವುದೇ ಲೇಔಟ್ ನಿರ್ಮಿಸಬಾರದು ಹಾಗೂ ಕೆರೆಯನ್ನು ಅಭಿವೃದ್ಧಿಗೊಳಿಸಬೇಕು ಎಂದು ಕೆರೆಯ ದಡದಲ್ಲಿ ಜುಲೈ 1ರಂದು ಸಮಾವೇಶಗೊಂಡಿದ್ದ ಸುಮಾರು 500 ಕ್ಕೂ ಹೆಚ್ಚು ನಾಗರಿಕರು ಒತ್ತಾಯಿಸಿದರು. ಯಲಹಂಕ ನಗರ ಮುನ್ಸಿಪಲ್ ಕಚೇರಿಗೆ ಮೆರವಣಿಗೆಯಲ್ಲಿ ತೆರಳಿದ ನಾಗರಿಕರು, ಯಾವುದೇ ಕಾರಣಕ್ಕೂ ಕೆರೆಯ ದಡದಲ್ಲಿ ಲೇಔಟ್ ನಿರ್ಮಿಸಕೂಡದು ಎಂದು ತಹಸಿಲ್ದಾರ್ಗೆ ಮನವಿ ಪತ್ರ ಸಲ್ಲಿಸಿದರು.
ಪ್ರಭಾವಿ ರಾಜಕಾರಣಿಗಳ ಸಂಬಂಧಿಗಳು ಕೆರೆಯ ದಂಡೆಯಲ್ಲಿ ಲೇಔಟ್ ನಿರ್ಮಾಣಕ್ಕೆ ಪ್ರಯತ್ನಿಸಿದ್ದಾರೆ. ಕೆರೆಯ ದಡವನ್ನೂ ಲೇಔಟ್ನಲ್ಲಿ ಒತ್ತುವರಿ ಮಾಡಿಕೊಳ್ಳುವ ಪ್ರಯತ್ನಗಳು ನಡೆದಿವೆ ಎಂದು ನಾಗರಿಕರು ಆಪಾದಿಸಿದ್ದಾರೆ.
ಅಮಾನಿ ಕೆರೆ ಯಲಹಂಕ ಆಸುಪಾಸಿನಲ್ಲಿನ ಅತಿದೊಡ್ಡ ಕೆರೆಯಾಗಿದ್ದು 80 ಎಕರೆ ವ್ಯಾಪ್ತಿಯನ್ನು ಹೊಂದಿದೆ. ಸುತ್ತಮುತ್ತಲಿನ ಪ್ರದೇಶಗಳಿಗೆ ಅಂತರ್ಜಲವನ್ನು ಪೂರೈಸುವ ಅಮಾನಿ ಕೆರೆಯಲ್ಲಿ ಪ್ರಾಚೀನ ದೇಗುಲ ಕೂಡ ಇದೆ.(ಇನ್ಫೋ ವಾರ್ತೆ)
-
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ನಿಮ್ಮ ಮನೆಯ ಸೀಲಿಂಗ್ ಫ್ಯಾನ್ನಲ್ಲಿ ಧೂಳು ತುಂಬಿದೆಯೇ? ನಿಮಿಷಗಳಲ್ಲಿ ಸ್ವಚ್ಛಗೊಳಿಸಲು ಇಲ್ಲಿವೆ 'ಸೀಕ್ರೆಟ್' ಟಿಪ್ಸ್ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ












Click it and Unblock the Notifications