ಸಂಗ್ರಾಂಸಿಂಗ್ ಹೇಳಿಕೆ ಹಿಂದಿನ ಪಿತೂರಿ ಪತ್ತೆಗೆ ತನಿಖೆ-ಧರ್ಮಸಿಂಗ್
ಸಂಗ್ರಾಂಸಿಂಗ್ ಹೇಳಿಕೆ ಹಿಂದಿನ ಪಿತೂರಿ ಪತ್ತೆಗೆ ತನಿಖೆ-ಧರ್ಮಸಿಂಗ್
ಬಿಜೆಪಿ ಸದಸ್ಯರದು ಹತಾಶ ವರ್ತನೆ, ಸಂಗ್ರಾಂ ಹೇಳಿಕೆಯ ಹಿಂದೆ ರಾಜಕೀಯ ಶಕ್ತಿಗಳ ಕೈವಾಡ
ಮಾಜಿ ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ , ಜಲ ಸಂಪನ್ಮೂಲ ಸಚಿವ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವ ಗುಲಾಂ ನಬಿ ಆಜಾದ್ ಹಾಗೂ ಡಿ.ಕೆ.ಶಿವಕುಮಾರ್ ಮಾಜಿ ಸಚಿವ ರೋಷನ್ಬೇಗ್ ಅವರನ್ನು ಛಾಪಾ ಪಾಪ ಪ್ರಕರಣದಿಂದ ಮುಕ್ತಗೊಳಿಸಲು ತಮ್ಮನ್ನು ಬಲಿಪಶುವನ್ನಾಗಿ ಮಾಡಿದರು ಎಂದು ಎರಡು ದಿನಗಳ ಹಿಂದಷ್ಟೇ ಸಂಗ್ರಾಂ ಸಿಂಗ್ ಆಪಾದಿಸಿದ್ದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಎನ್. ಧರ್ಮಸಿಂಗ್- ಸಂಗ್ರಾಂ ಸಿಂಗ್ರ ಹೇಳಿಕೆಯನ್ನು ಸಾರಾ ಸಗಟಾಗಿ ತಿರಸ್ಕರಿಸಿದರು.
ಆರೋಪಗಳನ್ನು ಮಾಡಿರುವ ವ್ಯಕ್ತಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದು , ಹತಾಶೆಯಿಂದ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಗಳು ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಧರ್ಮಸಿಂಗ್ ಹೇಳಿದರು.
ಸಂಗ್ರಾಂ ಸಿಂಗ್ರ ಹೇಳಿಕೆಯ ಹಿಂದೆ ಇರಬಹುದಾದ ದುರುದ್ದೇಶ ಅಥವಾ ಪಿತೂರಿಯನ್ನು ಪತ್ತೆ ಹಚ್ಚಲು ತನಿಖೆ ನಡೆಸುವಂತೆ ಪೊಲೀಸರಿಗೆ ತಿಳಿಸಿದ್ದೇನೆ. ಸಂಗ್ರಾಂರ ಹೇಳಿಕೆಯ ಹಿಂದೆ ಕೆಲಸ ಮಾಡಿರುವ ಕೆಲವು ಶಕ್ತಿಗಳ ಕುರಿತು ತಮಗೆ ಮಾಹಿತಿಯಿದೆ ಎಂದು ಧರ್ಮಸಿಂಗ್ ಮಾರ್ಮಿಕವಾಗಿ ನುಡಿದರು.
ಸಂಗ್ರಾಂ ಸಿಂಗ್ರ ಹೇಳಿಕೆಯ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಗದ್ದಲವೆಬ್ಬಿಸುತ್ತಿರುವ ಬಿಜೆಪಿ ಸದಸ್ಯರ ನಡನವಳಿಕೆಯನ್ನು ತರಾಟೆಗೆ ತೆಗೆದುಕೊಂಡ ಧರ್ಮಸಿಂಗ್- ಬಿಜೆಪಿ ಸದಸ್ಯರು ಹತಾಶೆಯಿಂದ ವರ್ತಿಸುತ್ತಿದ್ದಾರೆ ಎಂದರು. ವೀರಪ್ಪನ್ ಸೆರೆಯಿಂದ ವರನಟ ರಾಜ್ರನ್ನು ಬಿಡಿಸಿಕೊಳ್ಳಲು ಸರ್ಕಾರ ಯಾವುದೇ ಹಣ ನೀಡಿಲ್ಲ ಎಂದೂ ಧರ್ಮಸಿಂಗ್ ಹೇಳಿದರು.
(ಪಿಟಿಐ)
ಮುಖಪುಟ / ಧರ್ಮ-ಕಾರಣ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications