ಸಿಇಟಿ ಬಿಕ್ಕಟ್ಟಿಗೆ ವಿಶೇಷ ಮಸೂದೆ : ವಿಧಾನಮಂಡಲದಲ್ಲಿ ಬಿಸಿ ಚರ್ಚೆ
ಸಿಇಟಿ ಬಿಕ್ಕಟ್ಟಿಗೆ ವಿಶೇಷ ಮಸೂದೆ : ವಿಧಾನಮಂಡಲದಲ್ಲಿ ಬಿಸಿ ಚರ್ಚೆ
ಶಾಸಕಾಂಗ-ನ್ಯಾಯಾಂಗ ಸಂಘರ್ಷ , ಸದಸ್ಯರ ಆತಂಕ
ರಾಜ್ಯಸರ್ಕಾರದ ಶೇ.75:25 ಸೀಟು ಹಂಚಿಕೆ ಸೂತ್ರವನ್ನು ಕಾಮೆಡ್-ಕೆ ತಳ್ಳಿಹಾಕಿರುವುದರಿಂದ ವಿಶೇಷ ಮಸೂದೆಯನ್ನು ಅಂಗೀಕರಿಸುವುದು ಅಗತ್ಯವಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳ ಹಿತಾಸಕ್ತಿ ರಕ್ಷಣೆಗಾಗಿ ಸರ್ಕಾರ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಲೇಬೇಕಾಗಿದೆ ಎಂದು ಮುಖ್ಯಮಂತ್ರಿ ಎನ್.ಧರ್ಮಸಿಂಗ್ ಹೇಳಿದರು. ಅವರು ನಿರ್ಣಯದ ಚರ್ಚೆಯ ಸಂಬಂಧದ ಮಾತುಕತೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.
ಸಿಇಟಿ ಬಿಕ್ಕಟ್ಟು ಪರಿಹರಿಸುವ ವಿಶೇಷ ಮಸೂದೆ ರಚನೆಯ ನಿರ್ಣಯಕ್ಕೆ ಸದನ ಅನುವು ಮಾಡಿಕೊಡುವುದೆಂದು ಧರ್ಮಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು.
ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ವಿವಿಧ ಪಕ್ಷಗಳ ಸದಸ್ಯರು ಹಠಮಾರಿ ಕಾಮೆಡ್-ಕೆ ಪಟ್ಟಿಗೆ ಸರ್ಕಾರ ಮಣಿಯಬಾರದು ಎಂದು ಅಭಿಪ್ರಾಯಪಟ್ಟರು. ವಿಧಾನಸಭೆ ಅಂಗೀಕರಿಸಬಹುದಾದ ಮಸೂದೆ ಉಂಟು ಮಾಡಬಹುದಾದ ಕಾನೂನು ಬಿಕ್ಕಟ್ಟಿನ ಬಗ್ಗೆ ಸಂಯುಕ್ತ ಜನತಾದಳದ ಜೆ.ಸಿ.ಮಾಧುಸ್ವಾಮಿ ಆತಂಕ ವ್ಯಕ್ತಪಡಿಸಿದರು. (ಸುಪ್ರಿಂಕೋರ್ಟ್ನ 11 ಸದಸ್ಯರ ಸಾಂವಿಧಾನಾತ್ಮಕ ಪೀಠ ಸಿಇಟಿ ಸೀಟು ಹಂಚಿಕೆ ಹಾಗೂ ಶುಲ್ಕ ನಿಗದಿ ಕುರಿತು ನಿರ್ಧಾರ ಪ್ರಕಟಿಸಿದೆ. ರಾಜ್ಯದ ಮಸೂದೆಯಿಂದಾಗಿ ಸಾಂವಿಧಾನಾತ್ಮಕ ಸಂಘರ್ಷ ಉಂಟಾಗಬಹುದು.)
ಮಾಧುಸ್ವಾಮಿ ಮಾತಿಗೆ ಶಾಸಕರಾದ ಜಿ.ವಿ.ಶ್ರೀರಾಮರೆಡ್ಡಿ , ಕೆ.ಜಯಪ್ರಕಾಶ್ ಹೆಗ್ಡೆ, ನೆ.ಲ.ನರೇಂದ್ರಬಾಬು ಸಹಮತ ವ್ಯಕ್ತಪಡಿಸಿದರು.
ಗುಮಾನಿ ಬೇಡ : ವಿಧಾನಪರಿಷತ್ತಿನಲ್ಲಿ ನಿರ್ಣಯದ ಪರವಾಗಿ ಮಾತನಾಡಿದ ಜಲ ಸಂಪನ್ಮೂಲ ಸಚಿವ ಮಲ್ಲಿಕಾರ್ಜುನ ಖರ್ಗೆ, ನಿರ್ಣಯವನ್ನು ಬೆಂಬಲಿಸುವಂತೆ ಸದಸ್ಯರನ್ನು ಒತ್ತಾಯಿಸಿದರು. ಸರ್ಕಾರದ ನಿಲುವಿನ ಬಗೆಗೆ ಸದಸ್ಯರು ಯಾವುದೇ ಗುಮಾನಿ ಇಟ್ಟುಕೊಳ್ಳಬಾರದು ಎಂದು ಖರ್ಗೆ ಮನವಿ ಮಾಡಿದರು.
ಉನ್ನತ ಶಿಕ್ಷಣ ಸಚಿವ ಡಿ.ಎಂ.ಮಂಜುನಾಥ್ ನಿರ್ಣಯವನ್ನು ಅನುಮೋದಿಸಿ ಮಾತನಾಡಿದರೆ, ಬಿಜೆಪಿ ಸದಸ್ಯ ಎಂ.ಆರ್.ತಂಗಾ ನಿರ್ಣಯದ ಔಚಿತ್ಯವನ್ನು ಪ್ರಶ್ನಿಸಿದರು. ಈ ನಿರ್ಣಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಯಾವುದೇ ನ್ಯಾಯ ಒದಗಿಸಿಕೊಡುವುದಿಲ್ಲ ಎಂದು ತಂಗಾ ಹೇಳಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications