ದಿಕ್ಕುದೆಸೆಯಿಲ್ಲದ ರಾಜ್ಯಬಜೆಟ್ ಪ್ರವಾಸೋದ್ಯಮಕ್ಕೆ ಮಾರಕ-ಬಿಜೆಪಿ
ದಿಕ್ಕುದೆಸೆಯಿಲ್ಲದ ರಾಜ್ಯಬಜೆಟ್ ಪ್ರವಾಸೋದ್ಯಮಕ್ಕೆ ಮಾರಕ-ಬಿಜೆಪಿ
ವಿಧಾನ ಪರಿಷತ್ನಲ್ಲಿ ಮಾನಸ ಸರೋವರ, ಪಟ್ಟದಕಲ್ಲು, ಬಾದಾಮಿ ಹಾಗೂ ಐಹೊಳೆ
ಆಕರ್ಷಕ ಹಾಗೂ ಉತ್ಪ್ರೇಕ್ಷೆಯ ಅಂಕಿಸಂಖ್ಯೆಗಳ ಮೂಲಕ ಜನತೆಯನ್ನು ಮರುಳುಗೊಳಿಸಲು ರಾಜ್ಯ ಸರ್ಕಾರ ಹೊರಟಿದೆ. ಆದರೆ ಬಜೆಟ್ ಒಳಹೊಕ್ಕು ನೋಡಿದರೆ ಅದರ ಪೊಳ್ಳುತನ ಬಯಲಾಗುತ್ತದೆ ಎಂದು ಶಂಕರಮೂರ್ತಿ ಹೇಳಿದರು. ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.
ಹೊಟೇಲ್ಗಳು ಹಾಗೂ ವಸತಿಗೃಹಗಳ ಮೇಲಿನ ಲಕ್ಷುರಿ ಶುಲ್ಕವನ್ನು ಶೇ.4ರಿಂದ 12ಕ್ಕೆ ಹೆಚ್ಚಿಸಿರುವ ಕ್ರಮ ಸರಿಯಾದುದಲ್ಲ . ಇದರಿಂದಾಗಿ ರಾಜ್ಯಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆಯ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂದ ಶಂಕರಮೂರ್ತಿ- ಪ್ರವಾಸೋದ್ಯಮಕ್ಕೆ ಸರ್ಕಾರ ಹೆಚ್ಚಿನ ಒತ್ತು ನೀಡಬೇಕು, ರಾಜ್ಯದಲ್ಲಿನ ಪ್ರವಾಸೋದ್ಯಮದ ಎಲ್ಲ ಸಾಧ್ಯತೆಗಳನ್ನು ಬಳಸಿಕೊಳ್ಳಬೇಕು ಎಂದು ಆಗ್ರಹಿಸಿದರು.
ಭಾರತ-ಚೀನಾ ಗಡಿಯಲ್ಲಿರುವ ರಮಣೀಯ ಮಾನಸ ಸರೋವರಕ್ಕೆ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗೆ 20 ಸಾವಿರ ರುಪಾಯಿ ಸಹಾಯಧನ ನೀಡುವಂತೆ ಶಂಕರಮೂರ್ತಿ ಒತ್ತಾಯಿಸಿದರು. ಅವರ ಮಾತುಗಳಿಗೆ ಬಿಜೆಪಿ ಸದಸ್ಯ ಡಾ.ಎಂ.ಆರ್.ತಂಗಾ ಸಹಮತ ವ್ಯಕ್ತಪಡಿಸಿದರು.
ಚರ್ಚೆಯ ಮಧ್ಯಪ್ರವೇಶಿಸಿದ ಕಾರ್ಯ ನಿರತ ವಿಧಾನ ಸಭಾಧ್ಯಕ್ಷ ವಿ.ಆರ್.ಸುದರ್ಶನ್- ಐಹೊಳೆ, ಪಟ್ಟದಕಲ್ಲು ಹಾಗೂ ಬಾದಾಮಿಯಂಥ ಸಾಂಸ್ಕೃತಿಕ ಹಾಗೂ ಐತಿಹಾಸಿಕ ಮಹತ್ವದ ಸ್ಥಳಗಳನ್ನು ಹೊಂದಿರುವ ಉತ್ತರ ಕರ್ನಾಟಕದ ಬಿಜಾಪುರ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಸರ್ಕಾರ ವಿಶೇಷ ಗಮನ ಹರಿಸಬೇಕು ಎಂದರು.
(ಪಿಟಿಐ)
ಮುಖಪುಟ / ಧರ್ಮ-ಕಾರಣ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications