ಸ್ವರ್ಣವಲ್ಲಿ ಮಠದಲ್ಲಿ ಆ.6ರಿಂದ ‘ರಾಷ್ಟ್ರೀಯ ಜ್ಯೋತಿಷ್ಯ ಸಮ್ಮೇಳನ’
ಸ್ವರ್ಣವಲ್ಲಿ ಮಠದಲ್ಲಿ ಆ.6ರಿಂದ ‘ರಾಷ್ಟ್ರೀಯ ಜ್ಯೋತಿಷ್ಯ ಸಮ್ಮೇಳನ’
ಖಗೋಳಶಾಸ್ತ್ರದ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಜ್ಯೋತಿಷ್ಯಶಾಸ್ತ್ರದ ಮಿತಿ ಕುರಿತು ಚರ್ಚೆ
ಆಧುನಿಕ ಖಗೋಳಶಾಸ್ತ್ರದ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಜ್ಯೋತಿಷ್ಯಶಾಸ್ತ್ರದ ಮಿತಿ ಹಾಗೂ ಶಕ್ತಿಯ ಕುರಿತು ಸಮ್ಮೇಳನದಲ್ಲಿ ಚರ್ಚೆ ನಡೆಸಲಾಗುವುದು. ಆಗಸ್ಟ್ 6 ರಿಂದ 8ರವರೆಗೆ ಈ ಸಮ್ಮೇಳನ ನಡೆಯಲಿದೆ. ಸ್ವರ್ಣವಲ್ಲಿ ಸಂಸ್ಥಾನಕ್ಕೆ ಸೇರಿದ ರಾಜರಾಜೇಶ್ವರಿ ವಿದ್ಯಾಸಂಸ್ಥೆ ಸಹಯೋಗದೊಂದಿಗೆ ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲಗಳ ಇಲಾಖೆ ಈ ಸಮ್ಮೇಳನ ಏರ್ಪಡಿಸಿದೆ ಎಂದು ಸ್ವರ್ಣವಲ್ಲಿ ಸಂಸ್ಥಾನದ ಪೀಠಾಧಿಪತಿ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ್ಯೋತಿಷ್ಯಾಸ್ತ್ರಕ್ಕೆ ಪುರಾಣಕಾಲದಿಂದಲೂ ಆಧಾರಗಳಿದ್ದು, ವೇದಗಳಲ್ಲೂ ಮಹತ್ವದ ಉಲ್ಲೇಖಗಳಿವೆ. ವೇದಗಳಲ್ಲಿ ಭವಿಷ್ಯ ಕೂಡ ಒಂದು ಪ್ರಮುಖವಾಗ ವಿಭಾಗವಾಗಿದೆ. ಅನೇಕ ಮಂದಿ ಭವಿಷ್ಯಶಾಸ್ತ್ರದ ಕವಲುಗಳನ್ನು ವಿಸ್ತರಿಸುತ್ತಾ , ಜ್ಞಾನಶಾಖೆಗೆ ನೀರೆರೆದಿದ್ದಾರೆ. ಆರ್ಯಭಟ, ವರಾಹಮಿಹಿರ, ಭಾಸ್ಕರಾಚಾರ್ಯ ಅವರ ಕೊಡುಗೆ ಈ ನಿಟ್ಟಿನಲ್ಲಿ ಮಹತ್ವವಾದುದು. ಈ ಕೊಡುಗೆಗಳನ್ನು ಆಧುನಿಕ ಸಂದರ್ಭದಲ್ಲಿ , ಆಧುನಿಕ ವಿಧಾನಗಳಿಗೆ ಅಳವಡಿಸಿಕೊಳ್ಳಬೇಕಾಗಿದೆ.
ಪರಂಪರೆ ಹಾಗೂ ಆಧುನಿಕತೆಯ ಮಿಳಿತದ ಸಾಧ್ಯತೆಗಳು ಮಾತ್ರವಲ್ಲದೆ, ಪ್ರಸ್ತುತ ಜ್ಯೋತಿಷ್ಯಾಸ್ತ್ರ ಎದುರಿಸುತ್ತಿರುವ ಅನೇಕ ಸವಾಲುಗಳ ಕುರಿತು ಸಮ್ಮೇಳನದಲ್ಲಿ ಚರ್ಚಿಸಲಾಗುವುದು ಎಂದು ಸ್ವಾಮೀಜಿ ತಿಳಿಸಿದ್ದಾರೆ.
ಸಾಲಿಗ್ರಾಮದ ಶ್ರೀನಿವಾಸ ಅಡಿಗ ಸಮ್ಮೇಳನದ ಅಧ್ಯಕ್ಷತೆ ವಹಿಸುವರು. ತಿರುಪತಿಯ ಡಾ.ಸ್ವಾಮಿನಾಥನ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಮೈಸೂರಿನ ಪಂಡಿತ್ ಕೆ.ವರದಾಚಾರ್ಯ ಪ್ರಮುಖ ಭಾಷಣ ಮಾಡುವರು. ಪ್ರಮುಖ ಜ್ಯೋತಿಷ್ಕರು ಸಮ್ಮೇಳನದಲ್ಲಿ ತಮ್ಮ ಪ್ರಬಂಧ ಮಂಡಿಸುವರು ಎಂದು ಪ್ರಕಟಣೆ ಹೇಳಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications