ಮತ್ತೆ ಚುರುಕಾಯ್ತು ಮುಂಗಾರು ; ಕೊಚ್ಚಿಹೋದ ಜೀವಗಳು ಮೂರು
ಮತ್ತೆ ಚುರುಕಾಯ್ತು ಮುಂಗಾರು ; ಕೊಚ್ಚಿಹೋದ ಜೀವಗಳು ಮೂರು
ಮಲೆನಾಡು, ಕರಾವಳಿ, ಬಯಲುಸೀಮೆಯಲ್ಲಿ ಮಳೆ ಮಳೆ ಮಳೆ
ಬೆಳಗಾವಿಯ ಖಾನಾಪುರ ತಾಲ್ಲೂಕಿನ ಕುಂಬಾರಹಳ್ಳದಲ್ಲಿ ಭಾರೀ ಮಳೆಯಿಂದ ಉಂಟಾದ ನೀರಿನ ಸೆಳೆತಕ್ಕೆ ಮೂವರು ಕೊಚ್ಚಿ ಹೋಗಿದ್ದಾರೆ. ನೀರು ಪಾಲಾದವರಲ್ಲಿ ಒಬ್ಬಾಕೆ ಶಾಲಾ ಬಾಲಕಿ. ದೇವಸ್ಥಾನಕ್ಕೆ ಮಾರುತಿ ಕಾರಿನಲ್ಲಿ ಹೊರಟಿದ್ದ ಇಬ್ಬರು ಕಾರು ಸಮೇತ ಕೊಚ್ಚಿಹೋಗಿದ್ದರೆ, ಬಾಲಕಿ ಗೆಳತಿಯರೊಂದಿಗೆ ಹಳ್ಳ ದಾಟಲು ಪ್ರಯತ್ನಿಸುತ್ತಿದ್ದಾಗ ನೀರು ಪಾಲಾದಳು ಎಂದು ಬೆಳಗಾವಿ ವರದಿಗಳು ತಿಳಿಸಿವೆ.
ಮಲೆನಾಡು, ಕರಾವಳಿ ಮಾತ್ರವಲ್ಲದೆ ಬಯಲು ಸೀಮೆಯ ವಿವಿಧೆಡೆಗಳಲ್ಲೂ ಕಳೆದ ಎರಡು ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಕೊಡಗು ಜಿಲ್ಲೆ , ಪುತ್ತೂರು ಹಾಗೂ ಸುಳ್ಯದಲ್ಲಿ ಮಳೆಯಿಂದಾಗಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಆಗುಂಬೆಯಲ್ಲಿ ದಾಖಲೆ ಮಳೆ : ಚಿಕ್ಕಮಗಳೂರು, ಮಂಗಳೂರು, ಬೆಂಗಳೂರು, ಗುಲ್ಬರ್ಗ, ಶಿವಮೊಗ್ಗ , ಉತ್ತರಕನ್ನಡ, ದಾವಣಗೆರೆ, ರಾಯಚೂರು ಹಾಗೂ ಮೈಸೂರು ಉತ್ತಮ ಮಳೆ ಬಿದ್ದಿರುವ ಜಿಲ್ಲೆಗಳು. ಆಗುಂಬೆಯಲ್ಲಿ 19.24 ಸೆಂಮೀ ದಾಖಲೆ ಮಳೆ ಸುರಿದಿದೆ. ಇದು ಕಳೆದ ನಾಲ್ಕು ವರ್ಷಗಳಲ್ಲಿ ಆಗುಂಬೆಯಲ್ಲಿ ಸುರಿದ ದಾಖಲೆ ಮಳೆ. ಸುಬ್ರಹ್ಮಣ್ಯನ ಕುಕ್ಕೆಯನ್ನು ಸಂಪರ್ಕಿಸುವ ಉಪ್ಪಿನಂಗಡಿ-ಸುಬ್ರಹ್ಮಣ್ಯ, ಗುಂಡ್ಯ-ಸುಬ್ರಹ್ಮಣ್ಯ ಹಾಗೂ ಪುತ್ತೂರು-ಸುಬ್ರಹ್ಮಣ್ಯ ಸೇತುವೆಗಳು ಜಲಾವೃತಗೊಂಡಿದ್ದು , ಸಂಚಾರ ಸ್ಥಗಿತಗೊಂಡಿದೆ.
ತೀರ್ಥಹಳ್ಳಿಯಲ್ಲಿ ಉತ್ತಮ ಮಳೆಯಾಗುತ್ತಿದ್ದು , ತುಂಗಾ ಜಲಾನಯನ ಪ್ರದೇಶದಲ್ಲಿ ನೀರ ಚಿತ್ರಗಳು ತಂಪೆನಿಸುತ್ತಿವೆ. ಇದೇ ಕಾಲಕ್ಕೆ ಗಾಜನೂರು ಜಲಾಶಯದ ಒಳಹರಿವು ಹೆಚ್ಚಿದೆ. ಕೊಡಗು, ಮಡಿಕೇರಿಯಲ್ಲೂ ವ್ಯಾಪಕ ಮಳೆಯಾಗುತ್ತಿದ್ದು- ಕಾವೇರಿ ಹಾಗೂ ಲಕ್ಷ್ಮಣತೀರ್ಥ ನದಿಗಳು ಮೈದುಂಬಿವೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications