ತುಂಬುತ್ತಿರುವ ಕನ್ನಂಬಾಡಿಯಲ್ಲಿ ಜಲವೈಭವ : ಚಿಗುರಿದ ಕನಸುಗಳು !
ತುಂಬುತ್ತಿರುವ ಕನ್ನಂಬಾಡಿಯಲ್ಲಿ ಜಲವೈಭವ : ಚಿಗುರಿದ ಕನಸುಗಳು !
ಮಂಡ್ಯ-ಮೈಸೂರು ರೈತರ ಮೊಗದಲ್ಲಿ ಲಕಲಕಿಸುತ್ತಿರುವ ಕಳೆ....
ಜಲಾಶಯದಲ್ಲಿ ಪ್ರಸ್ತುತ (ಆ.6ರಂದು) 115.20 ಅಡಿ ನೀರಿದೆ. ಜಲಾಶಯದ ನೀರಿನ ಸಂಗ್ರಹದ ಗರಿಷ್ಠ ಮಟ್ಟ 124.80 ಅಡಿಗಳು. ನೀರಿನ ಮಟ್ಟದ ಹೆಚ್ಚಳದಿಂದ ಕಳೆದ ನಾಲ್ಕು ವರ್ಷಗಳಿಂದ ತಳಮಟ್ಟದಲ್ಲೇ ಇದ್ದ ಕನ್ನಂಬಾಡಿ ಈ ಬಾರಿ ತುಂಬುವ ಆಶಾಭಾವನೆ ಮೂಡಿದೆ.
ಕನ್ನಂಬಾಡಿ ಜಲಾಶಯದಲ್ಲಿ ನೀರ ಸಂಭ್ರಮ ತುಳುಕುತ್ತಿರುವುದರಿಂದ ಮಂಡ್ಯ ಹಾಗೂ ಮೈಸೂರಿನ ರೈತರು ಹರ್ಷಚಿತ್ತರಾಗಿದ್ದಾರೆ. ಈ ಬಾರಿಯಾದರೂ ಪೂರ್ಣಾವಧಿ ಬೆಳ ಕಾಣಬಹುದೆನ್ನುವ ನಿರೀಕ್ಷೆ ಅವರದು. ಬೆಂಗಳೂರಿನ ಜನತೆಗೆ ಕೊರೆಯಿಲ್ಲದೆ ಕುಡಿಯುವ ನೀರು ಪೂರೈಕೆಯಾಗುವ ಸಂಭ್ರಮ. ಈ ನಡುವೆ ಕನ್ನಂಬಾಡಿಯ ಜಲವೈಭವ ನೋಡಲಿಕ್ಕೆ ಬರುವ ಜನರ ಸಂಖ್ಯೆಯೂ ಹೆಚ್ಚಾಗಿದೆ.
ಯಾವುದೇ ಕ್ಷಣದಲ್ಲಿ ಭರ್ತಿ : ಕೆಆರ್ಎಸ್ ಜಲಾಶಯ ಯಾವುದೇ ಕ್ಷಣದಲ್ಲಿ ಭರ್ತಿಯಾಗಿ ನೀರನ್ನು ನದಿಗೆ ಬಿಡಬಹುದು. ಆ ಕಾರಣದಿಂದಾಗಿ ತಗ್ಗು ಪ್ರದೇಶದ ಜನರು ಜಾನುವಾರು ಹಾಗೂ ಇತರ ಸಾಮಗ್ರಿಗಳೊಂದಿಗೆ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಜಲಾಶಯದ ಅಧಿಕಾರಿಗಳು ಎಚ್ಚರಿಸಿದ್ದಾರೆ.
ಜಲಾಶಯದ ನೀರಿನ ಮಟ್ಟ 120 ಅಡಿ ದಾಟಿದ ನಂತರ ನೀರನ್ನು ನದಿಗೆ ಬಿಡುವ ಸಾಧ್ಯತೆಯಿದೆ. ಪ್ರಸ್ತುತ 4 ಸಾವಿರ ಕ್ಯುಸೆಕ್ಸ್ ನೀರನ್ನು ವಿವಿಧ ನಾಲೆಗಳಿಗೆ ಬಿಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಭರ್ತಿಯಾಗಿರುವ ಕಬಿನಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಯತ್ತಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications