ಐಟಿ ಅಭ್ಯುದಯಕ್ಕೆ ಎಲ್ಲ ಅನುಕೂಲ ಒದಗಿಸಲು ಸಿದ್ಧ -ಧರ್ಮಸಿಂಗ್
ಐಟಿ ಅಭ್ಯುದಯಕ್ಕೆ ಎಲ್ಲ ಅನುಕೂಲ ಒದಗಿಸಲು ಸಿದ್ಧ -ಧರ್ಮಸಿಂಗ್
ಮುಖ್ಯಮಂತ್ರಿಗಳೊಂದಿಗೆ ಉಪಹಾರ ಕೂಟದಲ್ಲಿ ಭಾಗವಹಿಸಿದ ಐಟಿ ದೊರೆಗಳ ಮೊಗದಲ್ಲಿ ನಗು
ಯಾವುದೇ ಕಾರಣಕ್ಕೂ ಐಟಿ ಕ್ಷೇತ್ರವನ್ನು ರಾಜ್ಯ ಸರ್ಕಾರ ಕಡೆಗಣಿಸುವುದಿಲ್ಲ . ಅದೇರೀತಿ ಐಟಿ ಅಭ್ಯುದಯಕ್ಕೆ ಸಾಧ್ಯವಿರುವ ಎಲ್ಲ ಅನುಕೂಲಗಳನ್ನು ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ಧರ್ಮಸಿಂಗ್ ಮಂಗಳವಾರ ತಿಳಿಸಿದರು. ಬೆಂಗಳೂರಿನ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರೊಂದಿಗೆ ಮಂಗಳವಾರ ನಡೆಸಿದ ಮಾತುಕತೆಯ ಸಂದರ್ಭದಲ್ಲಿ ಧರ್ಮಸಿಂಗ್ ಈ ಭರವಸೆ ನೀಡಿದರು.
ಐಟಿ ಕ್ಷೇತ್ರದ ಪ್ರಮುಖರೊಂದಿಗೆ ಮುಕ್ತ ಹಾಗೂ ಪ್ರಾಮಾಣಿಕ ಮಾತುಕತೆ ನಡೆಸಿದ್ದೇವೆ. ರಸ್ತೆಗಳು, ಫ್ಲೈಓವರ್ಗಳು ಹಾಗೂ ಇನ್ನಿತರ ಮೂಲಭೂತ ವ್ಯವಸ್ಥೆಗಳ ಕುರಿತು ಚರ್ಚಿಸಿದ್ದೇವೆ. ಐಟಿ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯವಾದ ಎಲ್ಲ ಕ್ರಮಗಳನು ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಧರ್ಮಸಿಂಗ್ ಐಟಿ ಮುಖ್ಯಸ್ಥರೊಂದಿಗಿನ ಉಪಹಾರ ಕೂಟದ ನಂತರ ಸುದ್ದಿಗಾರರಿಗೆ ತಿಳಿಸಿದರು.
ರೈತರು ಹಾಗೂ ಗ್ರಾಮೀಣ ಪ್ರದೇಶದ ಜನತೆಯತ್ತ ಸರ್ಕಾರದ ಆದ್ಯತೆ ಸ್ಪಷ್ಟವಾಗಿದೆ. ಹಾಗೆಂದು ನಗರ ಪ್ರದೇಶದ ಅಭಿವೃದ್ಧಿ ಹಾಗೂ ಮಾಹಿತಿ ತಂತ್ರಜ್ಞಾನ ಕ್ಷೇತ್ರವನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ ಎಂದು ಧರ್ಮಸಿಂಗ್ ಹೇಳಿದರು.
ಪ್ರಮುಖ ಸಚಿವರು, ಅಧಿಕಾರಿಗಳು, ವಿಪ್ರೋತ್ತಮ ಅಜೀಂ ಪ್ರೇಂಜಿ, ಎಂಫಸಿಸ್ನ ರವಿ ರಾಮು, ಇನ್ಫೋಸಿಸ್ ಅಧ್ಯಕ್ಷ ಹಾಗೂ ಸಿಇಒ ನಂದನ್ ನೀಲೇಕಣಿ ಮತ್ತಿತರರು ಮುಖ್ಯಮಂತ್ರಿ ಉಪಹಾರಕೂಟದಲ್ಲಿ ಭಾಗವಹಿಸಿದ್ದರು.
ಮುಖ್ಯಮಂತ್ರಿಗಳೊಂದಿಗಿನ ಮಾತುಕತೆ ಫಲಪ್ರದವಾಗಿದೆ ಎಂದು ಮಾತುಕತೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಪ್ರೋ ಮುಖ್ಯಸ್ಥ ಅಜೀಂ ಪ್ರೇಂಜಿ ತಿಳಿಸಿದರು.
ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಸೇವೆಗಳ ಮೇಲೆ ಹೇರಲಾಗಿರುವ (ಶೇ.12) ಮಾರಾಟ ತೆರಿಗೆಯ ಕುರಿತು ವಿಪ್ರೋ ಮುಖ್ಯಸ್ಥ ಪ್ರೇಂಜಿ ಅವರೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ಹಣಕಾಸು ಸಚಿವ ಹಾಗೂ ಉಪ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.
(ಪಿಟಿಐ)
ಮುಖಪುಟ / ಧರ್ಮ-ಕಾರಣ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications