ಬೆಳೆವಿಮೆ: ರಾಜ್ಯಸರ್ಕಾರದ ಪಾಲಿನ 122.13 ಕೋಟಿ ರು. ಬಿಡುಗಡೆ
ಬೆಳೆವಿಮೆ: ರಾಜ್ಯಸರ್ಕಾರದ ಪಾಲಿನ 122.13 ಕೋಟಿ ರು. ಬಿಡುಗಡೆ
ಕೃಷಿವಿಮೆ ವ್ಯಾಪ್ತಿಗೆ ಕಬ್ಬನ್ನೂ ತರಲು ರಾಜ್ಯ ಸರ್ಕಾರದ ಚಿಂತನೆ
2002-03ರ ಅವಧಿಯಲ್ಲಿ ರೈತರ ಬೆಳೆ ವಿಮಾ ಮೊತ್ತದಲ್ಲಿ ರಾಜ್ಯದ ಪಾಲನ್ನು ಸರ್ಕಾರ ಬಿಡುಗಡೆ ಮಾಡಿದೆ. ಈ ಸಂಬಂಧ 122.13 ಕೋಟಿ ರುಪಾಯಿಯನ್ನು ಆಗಸ್ಟ್ 10ರಂದೇ ಬಿಡುಗಡೆ ಮಾಡಲಾಗಿದೆ ಎಂದು ಕೃಷಿ ಸಚಿವ ಶ್ರೀನಿವಾಸಗೌಡ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರಸ್ತುತ ಬೆಳೆವಿಮೆ ಯೋಜನೆಯಲ್ಲಿ 13 ಬೆಳೆಗಳಿದ್ದು , ವಿಮಾ ವ್ಯಾಪ್ತಿಗೆ ಕಬ್ಬನ್ನೂ ತರಲು ರಾಜ್ಯ ಸರ್ಕಾರ ಉದ್ದೇಶಿಸಿದೆ ಎಂದು ಶ್ರೀನಿವಾಸಗೌಡ ಹೇಳಿದರು. ಕನಿಷ್ಠ ಬೆಂಬಲ ಬೆಲೆ ದೊರೆಯುವ ಬೆಳೆಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದೆ. ಈ ಪಟ್ಟಿ ಆಗಸ್ಟ್ ಅಂತ್ಯದೊಳಗೆ ಸಿದ್ಧವಾಗಬಹುದೆಂದು ನಿರೀಕ್ಷಿಸಲಾಗಿದೆ ಎಂದರು.
ರಾಜ್ಯದಲ್ಲಿ ಪ್ರಸಕ್ತ ಋತುವಿನಲ್ಲಿ ಶೇ.15ರಷ್ಟು ಮಳೆಯ ಕೊರತೆ ಕಂಡುಬಂದಿದೆ. ಮಳೆ ಬಿದ್ದಿರುವ ಕಡೆಯಲ್ಲೆಲ್ಲ ಉಳುಮೆ ಹಾಗೂ ಬಿತ್ತನೆ ಪ್ರಗತಿಯಲ್ಲಿದೆ. ರೈತರಿಗೆ ಬೀಜ ಮತ್ತು ಗೊಬ್ಬರಕ್ಕಾಗಿ ಸರ್ಕಾರ 70 ಕೋಟಿ ರು. ಬಿಡುಗಡೆ ಮಾಡಿದೆ ಎಂದು ಸಚಿವ ಶ್ರೀನಿವಾಸಗೌಡ ಹೇಳಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications