ಗೌಡರ 29 ಪುಟ ಪತ್ರಕ್ಕೆ ಕೃಷ್ಣರ 19 ಪುಟ ಪ್ರತಿಕ್ರಿಯೆ ; ಪಾಪ ಸಿಂಗ್!
ಗೌಡರ 29 ಪುಟ ಪತ್ರಕ್ಕೆ ಕೃಷ್ಣರ 19 ಪುಟ ಪ್ರತಿಕ್ರಿಯೆ ; ಪಾಪ ಸಿಂಗ್!
ಸುಳ್ಳುಬುರುಕ ಗೌಡರಿಂದ ಕಾಂಗ್ರೆಸ್ ತೇಜೋವಧೆ ಯತ್ನ - ಕೃಷ್ಣ ಅಳಲು
ಮುಖ್ಯಮಂತ್ರಿ ಎನ್.ಧರ್ಮಸಿಂಗ್ರಿಗೆ ಬಿಡಿಎ ಹಗರಣ ಸಂಬಂಧಿಸಿದಂತೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವ 19 ಪುಟಗಳ ಪತ್ರವನ್ನು ಎಸ್ಸೆಂ.ಕೃಷ್ಣ ಆ.12ರಂದು ಬರೆದಿದ್ದು , ಈ ಪತ್ರದಲ್ಲಿ ದೇವೇಗೌಡರ ವಿರುದ್ಧ ಕಿಡಿ ಕಾರಿದ್ದಾರೆ. ದೇವೇಗೌಡರು ತಿಳಿಸಿರುವಂತೆ ಬಡಾವಣೆಗಳನ್ನು ನಿರ್ಮಿಸಲು ಭೂಮಿ ಸ್ವಾಧೀನಪಡಿಸಿಕೊಳ್ಳುವಲ್ಲಿ ಹಾಗೂ ತುಂಡು ಗುತ್ತಿಗೆಗಳನ್ನು ನೀಡುವಲ್ಲಿ ಯಾವುದೇ ಅವ್ಯವಹಾರ ನೀಡಿಲ್ಲ . ಇದರಲ್ಲಿ ನನ್ನ ಕೈವಾಡವೇನೂ ಇಲ್ಲ ಎಂದು ಕೃಷ್ಣ ಸ್ಪಷ್ಟಪಡಿಸಿದ್ದಾರೆ.
ದೇವೇಗೌಡರು ಸುಳ್ಳು ಸುಳ್ಳೇ ಆರೋಪಿಸಿದ್ದಾರೆ. ಸೋನಿಯಾ ನೇತೃತ್ವದ ಕಾಂಗ್ರೆಸ್ನ ವರ್ಚಸ್ಸನ್ನು ಹಾಳು ಮಾಡುವುದು ಅವರ ಉದ್ದೇಶ ಎಂದು ಕೃಷ್ಣ ತಮ್ಮ ಪತ್ರದಲ್ಲಿ ಆಪಾದಿಸಿದ್ದಾರೆ.
ಗೌಡರ ಆರೋಪಗಳು ಕ್ರೂರತನದಿಂದ ಕೂಡಿವೆ. ಕಾಂಗ್ರೆಸ್ ಮಾತ್ರವಲ್ಲದೆ ತಮ್ಮ ಚಾರಿತ್ರ್ಯ ವಧೆ ಮಾಡುವ ಪ್ರಯತ್ನದಲ್ಲೂ ದೇವೇಗೌಡ ತೊಡಗಿದ್ದಾರೆ. ಆದರೆ ಈ ಪ್ರಯತ್ನದಲ್ಲಿ ಅವರು ಯಶಸ್ವಿಯಾಗುವುದಿಲ್ಲ ಎಂದು ಕೃಷ್ಣ ಹೇಳಿದ್ದಾರೆ.
ಈ ಮುನ್ನ ಬಿಡಿಎಯಲ್ಲಿ ವ್ಯಾಪಕ ಅವ್ಯವಹಾರ ನಡೆದಿದ್ದು , ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮುಖ್ಯಮಂತ್ರಿ ಧರ್ಮಸಿಂಗ್ರಿಗೆ 29 ಪುಟಗಳ ಪತ್ರ ಬರೆದಿದ್ದರು. ಬೆಂಗಳೂರು-ಮೈಸೂರು ಕಾರಿಡಾರ್ ಯೋಜನೆಗೆ ಸಂಬಂಧಿಸಿದಂತೆಯೂ ದೇವೇಗೌಡ-ಕೃಷ್ಣ ನಡುವೆ ಪತ್ರ ಸಮರ ಚಾಲ್ತಿಯಲ್ಲಿದೆ .
(ಇನ್ಫೋ ವಾರ್ತೆ)
ಮುಖಪುಟ / ಕೃಷ್ಣಗಾರುಡಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications