ಕಾರಿಡಾರ್ ಯೋಜನೆ ಬಗ್ಗೆ ವಿಮರ್ಶೆ, ತಪ್ಪಿತಸ್ಥರಿಗೆ ಶಿಕ್ಷೆ-ಧರ್ಮಸಿಂಗ್
ಬೆಂಗಳೂರು : ವಿವಾದಕ್ಕೆ ಕಾರಣವಾಗಿರುವ ಬೆಂಗಳೂರು-ಮೈಸೂರು ಅಭಿವೃದ್ಧಿ ಕಾರಿಡಾರ್ ಯೋಜನೆಯ ಬಗ್ಗೆ ಪರಿಶೀಲನೆ ನಡೆಸುವ ಮೂಲಕ ಸತ್ಯಾಸತ್ಯಗಳ ಒರೆಹಚ್ಚುವುದಾಗಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್ ತಿಳಿಸಿದ್ದಾರೆ.
ಪರಿಶೀಲನೆಯ ಮೊದಲ ಹಂತವಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕಚೇರಿಗೆ ಅಚಾನಕ್ ಭೇಟಿ ನೀಡಲಾಗುವುದು. ಕಾರಿಡಾರ್ ಯೋಜನೆಯ ಬಗ್ಗೆ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸುವವರೆಗೆ ಯಾವುದೇ ಟೌನ್ಷಿಪ್ ಯೋಜನೆ ಕೈಗೊಳ್ಳದಂತೆ ನಂದಿ ನಂದಿ ಕಾರಿಡಾರ್ ಸಂಸ್ಥೆಗೆ ಸೂಚಿಸಲಾಗುವುದು ಎಂದು ಮಂಗಳವಾರ ಸುದ್ದಿಗಾರರಿಗೆ ಮುಖ್ಯಮಂತ್ರಿ ಧರ್ಮಸಿಂಗ್ ತಿಳಿಸಿದರು.
ಪರಿಶೀಲನೆಯ ಸಂದರ್ಭದಲ್ಲಿ ಅವ್ಯವಹಾರಗಳು ಬೆಳಕಿಗೆ ಬಂದರೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಧರ್ಮಸಿಂಗ್ ಹೇಳಿದರು. ಪರಿಶೀಲನೆ ಎಂದರೇನು ಎನ್ನುವ ಸುದ್ದಿಗಾರರ ಕೆಣಕು ಪ್ರಶ್ನೆಗೆ ಹಾರಿಕೆ ಉತ್ತರ ನೀಡಿದ ಮುಖ್ಯಮಂತ್ರಿ- 1997ರಲ್ಲಿ ಯೋಜನೆಯ ಒಪ್ಪಂದಕ್ಕೆ ಅಂಕಿತ ಹಾಕಲಾಗಿದೆ. ಒಂದು ವೇಳೆ ಅವ್ಯವಹಾರದ ವಾಸನೆ ಕಂಡುಬಂದಲ್ಲಿ ಯೋಜನೆಯನ್ನು ರದ್ದುಪಡಿಸುವ ಸಾಧಕ ಬಾಧಕಗಳ ಕುರಿತು ಚಿಂತಿಸಲಾಗುವುದು ಎಂದರು.
ಕಾರಿಡಾರ್ ಯೋಜನೆಯಲ್ಲಿ ಅನೇಕ ಅವ್ಯವಹಾರಗಳು ನಡೆದಿವೆ. ಈ ಅವ್ಯವಹಾರಗಳು ಎಸ್ಸೆಂ.ಕೃಷ್ಣರ ಅಧಿಕಾರಾವಧಿಯಲ್ಲಿ ನಡೆದಿವೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಆರೋಪಿಸಿದ್ದರು. ಈ ಸಂಬಂಧ ಧರ್ಮಸಿಂಗ್ಗೆ 2 ಪುಟಗಳ ಪತ್ರ ಬರೆದಿದ್ದ ದೇವೇಗೌಡ ಸಿಬಿಐ ತನಿಖೆಗೆ ಒತ್ತಾಯಿಸಿದ್ದರು. ಆದರೆ ದೇವೇಗೌಡರ ಆರೋಪಗಳನ್ನು ರಾಜಕೀಯ ಕುತಂತ್ರ ಎಂದು ತಳ್ಳಿಹಾಕಿರುವ ಮಾಜಿ ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ಗೌಡರ ವಿರುದ್ಧ ಪತ್ರ ಸಮರ ಸಾರಿದ್ದಾರೆ.(ಪಿಟಿಐ)
-
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ನಿಮ್ಮ ಮನೆಯ ಸೀಲಿಂಗ್ ಫ್ಯಾನ್ನಲ್ಲಿ ಧೂಳು ತುಂಬಿದೆಯೇ? ನಿಮಿಷಗಳಲ್ಲಿ ಸ್ವಚ್ಛಗೊಳಿಸಲು ಇಲ್ಲಿವೆ 'ಸೀಕ್ರೆಟ್' ಟಿಪ್ಸ್ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ












Click it and Unblock the Notifications