ಉಮಾಭಾರತಿ ಬಂಧಿಸಿದರೆ ಹುಷಾರ್ : ರಾಜ್ಯ ಬಿಜೆಪಿ ಗುರ್ರ್ ಗುರ್ರ್
ಉಮಾಭಾರತಿ ಬಂಧಿಸಿದರೆ ಹುಷಾರ್ : ರಾಜ್ಯ ಬಿಜೆಪಿ ಗುರ್ರ್ ಗುರ್ರ್
ಗೋವಾ ಎಕ್ಸ್ಪ್ರೆಸ್ನಲ್ಲಿ ಹುಬ್ಬಳ್ಳಿಯತ್ತ ಉಮಾ ಪಯಣ ; ಬುಧವಾರದ ನಾಟಕಕ್ಕೆ ಉಭಯ ತಂಡಗಳಿಂದ ವೇದಿಕೆ ರೆಡಿ.
ಹತ್ತು ವರ್ಷಗಳ ಹಿಂದಿನ ಈದ್ಗಾ ಪ್ರಕರಣದನ್ವಯ, ಹುಬ್ಬಳ್ಳಿ ಕೋರ್ಟ್ನಲ್ಲಿ ಶರಣಾಗಲು ಬುಧವಾರ ಬೆಳಗ್ಗೆ ಉಮಾಭಾರತಿ ಕರ್ನಾಟಕಕ್ಕೆ ಗೋವಾ ಎಕ್ಸ್ಪ್ರೆಸ್ನಲ್ಲಿ ಬರುತ್ತಿದ್ದಾರೆ. ರಾಜ್ಯಸರಕಾರ ಹಳೆಯ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಂಡಿದೆ. ಆಕೆಯನ್ನು ಬಂಧಿಸಿದರೆ ಅನಗತ್ಯ ಘರ್ಷನೆಗೆ ಸರಕಾರವೇ ಕಾರಣವಾಗುತ್ತದೆ ಎಂದು ಪಕ್ಷದ ಕಾರ್ಯದರ್ಶಿ ಅರವಿಂದ್ ನಿಂಬಾವಳಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಇದೊಂದು ರಾಜಕೀಯ ಪ್ರೇರಿತ ವಿಚಾರ. ಕಾಂಗ್ರೆಸ್ನಾಯಕಿ ಸೋನಿಯಾ ಗಾಂಧಿ ಸೂಚನೆ ಮೇರೆಗೆ, ಧರ್ಮಸಿಂಗ್ ಸರಕಾರ ಕಾರ್ಯಪ್ರವೃತ್ತವಾಗಿದೆ. ಈ ಪ್ರಕರಣದಲ್ಲಿ 21 ಜನರನ್ನು ಆರೋಪಿಗಳೆಂದು ಹೇಳಲಾಗಿದೆ. ಆದರೆ ಅಪರಾಧಕ್ಕಿಂತ, ಉಮಾಭಾರತಿಯೇ ಸರಕಾರಕ್ಕೆ ಮುಖ್ಯವಾಗಿದ್ದಾರೆ. ಮುಂದಿನ ಬೆಳವಣಿಗೆಗಳನ್ನು ಗಮನಿಸಲು ರಾಜ್ಯ ಬಿಜೆಪಿ ಅಧ್ಯಕ್ಷ ಅನಂತಕುಮಾರ್ ಸೇರಿದಂತೆ ಅನೇಕ ಮುಖಂಡರು ಬುಧವಾರ ಹುಬ್ಬಳ್ಳಿಗೆ ತೆರಳಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ.
ಕಾಂಗ್ರೆಸ್ ಪಿತೂರಿ: ಈ ಪ್ರಕರಣ ಕಾಂಗ್ರೆಸ್ನ ಪೂರ್ವನಿಯೋಜಿತ ಕೃತ್ಯ. ರಾಷ್ಟ್ರದಲ್ಲಿ ಶಾಂತಿ ಕದಡುವ ಪ್ರಯತ್ನ ನಡೆದಿದೆ. ರಾಷ್ಟ್ರಧ್ವಜ ಹಾರಿಸುವುದರಿಂದ ಯಾವುದೇ ಕೋಮಿಗೆ ತೊಂದರೆಯಾಗುವುದಿಲ್ಲ ಎಂದು ಉಮಾಭಾರತಿ ಅಭಿಪ್ರಾಯಪಟ್ಟಿದ್ದಾರೆ.
ನಾನು ಯಾವುದೇ ಹಿಂಸೆಯಲ್ಲಿ ಪಾಲ್ಗೊಂಡಿಲ್ಲ . ಹಿಂಸೆಗೆ ಪ್ರಚೋದಿಸಿದ್ದೇ ಕರ್ನಾಟಕದ ಪೊಲೀಸರು ಎಂದಿರುವ ್ಫಉಮಾ- ಕಾಂಗ್ರೆಸ್ ನನ್ನ ವಿರುದ್ಧ ಪಿತೂರಿ ಮಾಡಿದೆ ಎಂದು ಆಪಾದಿಸಿದ್ದಾರೆ. ನ್ಯಾಯಾಲಯದ ಮುಂದೆ ಶರಣಾಗಲು ಹುಬ್ಬಳ್ಳಿಗೆ ಧಾವಿಸುತ್ತಿರುವ ಅವರು ಮಹಾರಾಷ್ಟ್ರದ ಭೂಸ್ವಾಲ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
(ಪಿಟಿಐ)
ವಾರ್ತಾ ಸಂಚಯ
ರಾಜ್ಯಕ್ಕೆ ಕಾಲಿಟ್ಟ ತಕ್ಷಣ ಉಮಾ ಭಾರತಿ ಬಂಧನ -ಡಿಜಿಪಿ ಬೋರ್ಕರ್
ಭೋಪಾಲ್ನತ್ತ ರಾಜ್ಯದ ಪೊಲೀಸ್ : ಉಮಾ ರಾಜೀನಾಮೆ ಸ್ವೀಕೃತ
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications