ಎರಡು ರಷ್ಯನ್ ವಿಮಾನ ಸ್ಫೋಟ, 90 ಸಾವು, ಉಗ್ರರ ಕೈವಾಡ ಶಂಕೆ
ಎರಡು ರಷ್ಯನ್ ವಿಮಾನ ಸ್ಫೋಟ, 90 ಸಾವು, ಉಗ್ರರ ಕೈವಾಡ ಶಂಕೆ
ಏಕಕಾಲದಲ್ಲಿ ರೇಡಾರ್ ತೆರೆಯಿಂದ ಮಾಯವಾದ ವಿಮಾನಗಳು! ಸೆ.11 ಸಮೀಪಿಸುತ್ತಿದೆ.....
ಹೆಚ್ಚೂಕಡಿಮೆ ಒಂದೇ ಸಮಯದಲ್ಲಿ ಅಪಘಾತಕ್ಕೀಡಾದ ವಿಮಾನಗಳ ದುರಂತವನ್ನು ಭಯೋತ್ಪಾದಕರ ಕೃತ್ಯ ಎಂದು ಶಂಕಿಸಲಾಗಿದೆ. ಸೆಪ್ಟಂಬರ್ 11 ಸಮೀಪಿಸುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.
40 ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ಒಂದು ವಿಮಾನ ರಷ್ಯಾದ ದಕ್ಷಿಣ ಭಾಗದ ರೊಸ್ತಾವ್-ಆನ್-ಡನ್ ನಗರದ ಬಳಿ ಕುಸಿಯುವ ಮುನ್ನ ಹೈಜಾಕ್ ಅಲಾರಾಂ ಕಳುಹಿಸಿದೆ ಎಂದು ಇಂಟರ್ಫ್ಯಾಕ್ಸ್ ಸುದ್ದಿಸಂಸ್ಥೆ ತಿಳಿಸಿದೆ. ಮಾಸ್ಕೋಗೆ 90 ಮೈಲು ದೂರದ ತುಲಾ ಎನ್ನುವ ಪ್ರದೇಶದಲ್ಲಿ ಮತ್ತೊಂದು ವಿಮಾನ ಸ್ಫೋಟಿಸಿದೆ.
ನಿಮಿಷದ ಅಂತರದಲ್ಲಿ ಎರಡೂ ವಿಮಾನಗಳು ರೇಡಾರ್ ಕಣ್ಗಾವಲಿನಿಂದ ಕಣ್ಮರೆಯಾದವು ಎನ್ನಲಾಗಿದೆ. ಘಟನೆಯ ಬಗ್ಗೆ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದು - ಎಫ್ಎಸ್ಬಿ ರಕ್ಷಣಾ ಸೇವಾದಳಕ್ಕೆ ಪ್ರಕರಣದ ಬಗ್ಗೆ ತನಿಖೆ ನಡೆಸಲು ಆದೇಶಿದ್ದಾರೆ.
ದೇಶದಾದ್ಯಂತ ಎಲ್ಲ ವಿಮಾನ ನಿಲ್ದಾಣಗಳಲ್ಲೂ ಬಿಗಿ ಪಹರೆ ಹಾಕಲಾಗಿದೆ.
(ಏಜನ್ಸೀಸ್)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications